ಮುಂಬೈ: ಬೇಸಿಗೆಯ ಬೇಗೆಯಿಂದ ತತ್ತರಿಸಿ ಹೋದ ಮುಂಬೈ ಎಂಬ ಮಾಯಾ ನಗರಿಗೆ ಮುಂಗಾರು ಮಳೆ ನೆಮ್ಮದಿಯನ್ನು ಕರುಣಿಸಿದೆ.
ಶನಿವಾರ ಬೆಳಿಗ್ಗೆಯಿಂದ ಮುಂಬೈಯ ಹಲವು
ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದೆ.ಹವಾಮಾನ ಇಲಾಖೆ ಜೂನ್ ಮೊದಲ ವಾರದಂದು ಮಳೆಯಾಗುವ ಮುನ್ಸೂಚನೆ ನೀಡಿದೆಯಾದರೂ ವಾಣಿಜ್ಯ ನಗರ ಮುಂಬೈ ಬಿರು ಬಿಸಿಲಿಗೆ ತತ್ತರಿಸಿ ಹೋಗಿತ್ತು.
ಮುಂಗಾರು ಮಳೆಯ ಆಗಮನದಿಂದ ಮುಂಬೈ ಜನರು ಸಂತಸದಿಂದ ನೆಮ್ಮದಿಯನ್ನು ಕಂಡರು.
ಮುಂಬೈನ ಹಲವು ಕಡೆಗಳಲ್ಲಿ ಬಾರೀ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಮುಂಬೈ ಮಹಾನಗರ ಪಾಲಿಕೆ ತನ್ನ ಎಲ್ಲಾ ಸಿಬಂದಿಗಳಿಗೆ ಸೂಕ್ತ ರೀತಿಯಲ್ಲಿ ಜನರಿಗೆ ಸ್ಪಂದಿಸುವಂತೆ ಮತ್ತು ಹವಾಮಾನ ಸ್ಥಿತಿ ಗತಿಯ ಬಗ್ಗೆ ವರದಿ ನೀಡಲು ಕೋರಿದೆ.
ಅಗ್ನಿಶಾಮಕ ದಳ ಹಾಗೂ ವಿದ್ಯುತ್ ನಿಗಮಕ್ಕೆ ಎಚ್ಚರಿಕೆಯನ್ನು ನೀಡಲಾಗಿದೆ. ಈ ಮೂಲಕ ಮುಂಬೈ ಬಾರೀ ಮಳೆಯನ್ನು ಎದುರಿಸಲು ಸಿದ್ಧತೆಯನ್ನು ಮಾಡ ತೊಡಗಿದೆ.
ವರದಿ : ಮುಹಮ್ಮದ್ ಉಳ್ಳಾಲ್ (ಮುಂಬೈ ಅಂದೇರಿ)
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್