ಮುಂಬೈ: ಬೇಸಿಗೆಯ ಬೇಗೆಯಿಂದ ತತ್ತರಿಸಿ ಹೋದ ಮುಂಬೈ ಎಂಬ ಮಾಯಾ ನಗರಿಗೆ ಮುಂಗಾರು ಮಳೆ ನೆಮ್ಮದಿಯನ್ನು ಕರುಣಿಸಿದೆ.
ಶನಿವಾರ ಬೆಳಿಗ್ಗೆಯಿಂದ ಮುಂಬೈಯ ಹಲವು
ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದೆ.ಹವಾಮಾನ ಇಲಾಖೆ ಜೂನ್ ಮೊದಲ ವಾರದಂದು ಮಳೆಯಾಗುವ ಮುನ್ಸೂಚನೆ ನೀಡಿದೆಯಾದರೂ ವಾಣಿಜ್ಯ ನಗರ ಮುಂಬೈ ಬಿರು ಬಿಸಿಲಿಗೆ ತತ್ತರಿಸಿ ಹೋಗಿತ್ತು.
ಮುಂಗಾರು ಮಳೆಯ ಆಗಮನದಿಂದ ಮುಂಬೈ ಜನರು ಸಂತಸದಿಂದ ನೆಮ್ಮದಿಯನ್ನು ಕಂಡರು.
ಮುಂಬೈನ ಹಲವು ಕಡೆಗಳಲ್ಲಿ ಬಾರೀ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಮುಂಬೈ ಮಹಾನಗರ ಪಾಲಿಕೆ ತನ್ನ ಎಲ್ಲಾ ಸಿಬಂದಿಗಳಿಗೆ ಸೂಕ್ತ ರೀತಿಯಲ್ಲಿ ಜನರಿಗೆ ಸ್ಪಂದಿಸುವಂತೆ ಮತ್ತು ಹವಾಮಾನ ಸ್ಥಿತಿ ಗತಿಯ ಬಗ್ಗೆ ವರದಿ ನೀಡಲು ಕೋರಿದೆ.
ಅಗ್ನಿಶಾಮಕ ದಳ ಹಾಗೂ ವಿದ್ಯುತ್ ನಿಗಮಕ್ಕೆ ಎಚ್ಚರಿಕೆಯನ್ನು ನೀಡಲಾಗಿದೆ. ಈ ಮೂಲಕ ಮುಂಬೈ ಬಾರೀ ಮಳೆಯನ್ನು ಎದುರಿಸಲು ಸಿದ್ಧತೆಯನ್ನು ಮಾಡ ತೊಡಗಿದೆ.
ವರದಿ : ಮುಹಮ್ಮದ್ ಉಳ್ಳಾಲ್ (ಮುಂಬೈ ಅಂದೇರಿ)
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ