ಮುಂಬೈ: ಬೇಸಿಗೆಯ ಬೇಗೆಯಿಂದ ತತ್ತರಿಸಿ ಹೋದ ಮುಂಬೈ ಎಂಬ ಮಾಯಾ ನಗರಿಗೆ ಮುಂಗಾರು ಮಳೆ ನೆಮ್ಮದಿಯನ್ನು ಕರುಣಿಸಿದೆ.
ಶನಿವಾರ ಬೆಳಿಗ್ಗೆಯಿಂದ ಮುಂಬೈಯ ಹಲವು
ಪ್ರದೇಶಗಳಲ್ಲಿ ಮಳೆ ಸುರಿಯುತ್ತಿದೆ.ಹವಾಮಾನ ಇಲಾಖೆ ಜೂನ್ ಮೊದಲ ವಾರದಂದು ಮಳೆಯಾಗುವ ಮುನ್ಸೂಚನೆ ನೀಡಿದೆಯಾದರೂ ವಾಣಿಜ್ಯ ನಗರ ಮುಂಬೈ ಬಿರು ಬಿಸಿಲಿಗೆ ತತ್ತರಿಸಿ ಹೋಗಿತ್ತು.
ಮುಂಗಾರು ಮಳೆಯ ಆಗಮನದಿಂದ ಮುಂಬೈ ಜನರು ಸಂತಸದಿಂದ ನೆಮ್ಮದಿಯನ್ನು ಕಂಡರು.
ಮುಂಬೈನ ಹಲವು ಕಡೆಗಳಲ್ಲಿ ಬಾರೀ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
ಮುಂಬೈ ಮಹಾನಗರ ಪಾಲಿಕೆ ತನ್ನ ಎಲ್ಲಾ ಸಿಬಂದಿಗಳಿಗೆ ಸೂಕ್ತ ರೀತಿಯಲ್ಲಿ ಜನರಿಗೆ ಸ್ಪಂದಿಸುವಂತೆ ಮತ್ತು ಹವಾಮಾನ ಸ್ಥಿತಿ ಗತಿಯ ಬಗ್ಗೆ ವರದಿ ನೀಡಲು ಕೋರಿದೆ.
ಅಗ್ನಿಶಾಮಕ ದಳ ಹಾಗೂ ವಿದ್ಯುತ್ ನಿಗಮಕ್ಕೆ ಎಚ್ಚರಿಕೆಯನ್ನು ನೀಡಲಾಗಿದೆ. ಈ ಮೂಲಕ ಮುಂಬೈ ಬಾರೀ ಮಳೆಯನ್ನು ಎದುರಿಸಲು ಸಿದ್ಧತೆಯನ್ನು ಮಾಡ ತೊಡಗಿದೆ.
ವರದಿ : ಮುಹಮ್ಮದ್ ಉಳ್ಳಾಲ್ (ಮುಂಬೈ ಅಂದೇರಿ)
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ