janadhvani

Kannada Online News Paper

ಜೂನ್.24: ಕಾಪು ಡಿವಿಷನ್ ಎಸ್ಸೆಸ್ಸೆಫ್ – ಸುಹ್ಬಾ ಕ್ಯಾಂಪ್

ಕಾಪು, ಜೂನ್ 22; ರಾಜ್ಯ ಎಸ್ಸೆಸ್ಸೆಫ್ ಮಹಾತ್ವಾಕಾಂಕ್ಷೆಯ ಯೋಜನೆ ಸನ್ನದ್ಧ ಕಾರ್ಯಕರ್ತರ ಪಡೆಯನ್ನು ಮುಂದಿನ ಪೀಳಿಗೆಗಾಗಿ ಸಕ್ರೀಯ ಕಾರ್ಯಾಚರಣೆಗೆ ಸಿದ್ಧಪಡಿಸುವ ಉದ್ದೇಶದೊಂದಿಗೆ ರಾಜ್ಯ ಕ್ಯೂಡಿ ಉಪಸಮಿತಿ ಅಧೀನದಲ್ಲಿ “ಸುಹ್ಬಾ ಕ್ಯಾಂಪ್” ರಾಜ್ಯಾಧ್ಯಂತ ನಡೆಯುತ್ತಿರುವ ಅಂಗವಾಗಿ ಎಸ್ಸೆಸ್ಸೆಫ್ ಕಾಪು ಡಿವಿಷನ್ ವತಿಯಿಂದ 2022 ಜೂನ್ 24 ಶುಕ್ರವಾರ ಜೇಸಿಐ ಭವನ ಕಾಪುವಿನಲ್ಲಿ ನಡೆಯಲಿದೆ.

ಡಿವಿಷನ್ ಅಧ್ಯಕ್ಷ ಮುಹಮ್ಮದ್ ಮುಸ್ತಫ ಸಖಾಫಿ ಅಧ್ಯಕ್ಷತೆಯಲ್ಲಿ ಡಿವಿಷನ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಶಿರ್ವ ಸ್ವಾಗತಿಸಿ, ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಅಹ್ಮದ್ ಶಬೀರ್ ಸಖಾಫಿ ಉಧ್ಘಾಟಿಸಲಿದ್ದಾರೆ.

ರಾಜ್ಯ ಕ್ಯೂಡಿ ಕಾರ್ಯದರ್ಶಿ ಮುಸ್ತಫ ನಈಮಿ ಹಿಮಮಿ ಹಾವೇರಿ ವಿಷಯ ಮಂಡಿಸಲಿದ್ದು, ಜಿಲ್ಲಾ ಕ್ಯೂಡಿ ಕನ್ವೀನರ್ ಮುಹಿಯ್ಯುದ್ದೀನ್ ಸಖಾಫಿ ಪಯ್ಯಾರು, ರಾಜ್ಯ ಸದಸ್ಯ ಹಾಗೂ ಡಿವಿಷನ್ ಉಸ್ತುವಾರಿ ಮನ್ಸೂರ್ ಕೆಎಸ್ಸೆಮ್ ಉಡುಪಿ, ರಾಜ್ಯ ಸದಸ್ಯ ಮುಹಮ್ಮದ್ ರಕೀಬ್ ಕನ್ನಂಗಾರ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಜೂರು ಹಾಗೂ ಡಿವಿಷನ್ ಸದಸ್ಯರು ಉಪಸ್ಥಿತರಿರುವರು.

ಈ ಕ್ಯಾಂಪಿನಲ್ಲಿ ಡಿವಿಷನ್ ವ್ಯಾಪ್ತಿಯ ಶಾಖೆಗಳ ನೊಂದಾಯಿತ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಾಪು ಡಿವಿಷನ್ ಕ್ಯೂಡಿ ಕಾರ್ಯದರ್ಶಿ ಆಸಿಫ್ ಬೆಳಪು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ಡಿವಿಷನ್ ಮೀಡಿಯಾ ಸೆಲ್ ವರದಿ ಮಾಡಿದೆ.

error: Content is protected !! Not allowed copy content from janadhvani.com