ಅಬುಧಾಬಿ | ಬೇಸಿಗೆ ರಜೆಯಿಂದಾಗಿ ದಟ್ಟಣೆ ಹೆಚ್ಚಿರುವ ಕಾರಣ ಭಾರತಕ್ಕೆ ಪ್ರಯಾಣಿಸುವ ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ ಮೂರು ಗಂಟೆಗಳ ಮೊದಲು ವಿಮಾನ ನಿಲ್ದಾಣದ ಚೆಕ್-ಇನ್ ಕೌಂಟರ್ಗೆ ವರದಿ ಮಾಡಬೇಕು ಎಂದು ಗೋಏರ್ ಹೇಳಿದೆ.
ಕೋವಿಡ್ನಿಂದಾಗಿ ಕಳೆದ ಎರಡು ವರ್ಷಗಳಿಂದ ಊರಿಗೆ ತೆರಳದ ಕುಟುಂಬಗಳು, ಬೇಸಿಗೆ ರಜೆಗಾಗಿ ಶಾಲೆ ಮುಚ್ಚಿದ ಕಾರಣ ಗುಂಪು ಗುಂಪಾಗಿ ಹೊರಡುತ್ತಿದ್ದಾರೆ. ಪ್ರಯಾಣಿಕರ ಹೆಚ್ಚಳದಿಂದಾಗಿ ಅಬುಧಾಬಿ ಮತ್ತು ದುಬೈ ವಿಮಾನ ನಿಲ್ದಾಣಗಳು ಭಾರೀ ದಟ್ಟಣೆಯನ್ನು ಅನುಭವಿಸುತ್ತಿವೆ.
ರಜಾ ದಿನಗಳಲ್ಲಿ ಹೆಚ್ಚುತ್ತಿರುವ ನೂಕುನುಗ್ಗಲು ಕಾರಣ ಸಮಯಕ್ಕೆ ಸರಿಯಾಗಿ ವಿಮಾನ ನಿಲ್ದಾಣಕ್ಕೆ ತಲುಪದಿರುವುದನ್ನು ತಪ್ಪಿಸಲು ಮತ್ತು ಪ್ರಯಾಣದ ವ್ಯವಸ್ಥೆಗಳನ್ನು ಪೂರ್ಣಗೊಳಿಸಲು ಬೇಗನೇ ಆಗಮಿಸುವಂತೆ ಸೂಚಿಸಲಾಗಿದೆ.
ಎಲ್ಲಾ ಪ್ರಯಾಣಿಕರು ಕೋವಿಡ್-19 ವ್ಯಾಕ್ಸಿನೇಷನ್ ಪ್ರಮಾಣಪತ್ರ / ಮಾನ್ಯ RT-PCR ವರದಿಯನ್ನು ಏರ್ ಸುವಿಧ ಪೋರ್ಟಲ್ನಲ್ಲಿ (7) ಹೊರಡುವ ಮುಂಚಿತವಾಗಿ ಅಪ್ಲೋಡ್ ಮಾಡಬೇಕಾಗಿದೆ. ಅದರ ಪ್ರಿಂಟ್ ಔಟ್ ನ್ನು ಕೈಯಲ್ಲಿಡಬೇಕು.
ವ್ಯಾಕ್ಸಿನೇಷನ್ ತೆಗೆಯದ 5 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಮಕ್ಕಳು ನಿರ್ಗಮಿಸುವ 72 ಗಂಟೆಗಳ ಒಳಗೆ ಮಾನ್ಯವಾದ ಪಿಸಿಆರ್ ವರದಿಯನ್ನು ಪಡೆಯಬೇಕು. ನೇರ ಸಂಪರ್ಕ ಮತ್ತು ನವೀಕರಣಗಳಿಗಾಗಿ ಪ್ರಯಾಣಿಕರ ಸ್ಥಳೀಯ ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿಯನ್ನು PNR ನಲ್ಲಿ ಅಪ್ಡೇಟ್ ಮಾಡಿರುವುದನ್ನು ಖಚಿತಪಡಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಯುಎಇಯಲ್ಲಿರುವ GoFirst ಕಚೇರಿಗಳು ಅಥವಾ ಸೇಲ್ಸ್ ತಂಡವನ್ನು ಸಂಪರ್ಕಿಸಿ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ