ಇತ್ತೀಚೆಗೆ ಕಾಟಿಪಳ್ಳ ಪ್ರದೇಶದ ಮದರಸ ವಿಧ್ಯಾರ್ಥಿ ಶಯಾನ್ ಮೇಲೆ ದುಷ್ಕರ್ಮಿಗಳು ರಾತ್ರಿ ವೇಳೆ ಹಲ್ಲೆ ನಡೆಸಿ ಎಳೆದಾಡಿದ್ದು,ಸ್ಥಳೀಯವಾಗಿ ದುಷ್ಕರ್ಮಿಗಳ ಈ ಕೃತ್ಯ ಕೋಮು ಗಲಭೆ ಸೃಷ್ಟಿಸುವ ಹುನ್ನಾರ ದಂತೆ ಕಾಣುತ್ತದೆ. ಸುರತ್ಕಲ್ ಏರಿಯಾದಲ್ಲಿ ಈ ಹಿಂದೆ ಕೂಡಾ ಇಂತಹುದೇ ಕೆಲವು ಪ್ರಕರಣಗಳು ನಡೆದಿರುತ್ತದೆ
ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಬೇಕು. ಈ ಕೃತ್ಯವನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ರಾಜ್ಯದ ಜನರನ್ನು ಮತೀಯ ಸಂಕೇತಗಳ ಮೇಲೆ ದಾಳಿ ನಡೆಸುವ ಮೂಲಕ ಭಯ ಸೃಷ್ಟಿಸುವ ಚಾಳಿ ಕೇವಲ ಹಿಜಾಬ್, ಆಝಾನ್ ಮೂಲಕ ನಡೆಸುವ ಪ್ರಯತ್ನಕ್ಕೆ ಮಾತ್ರಾ ಸೀಮಿತವಾಗಿಲ್ಲ, ಅದರ ಮುಂದುವರಿದ ಭಾಗವೇ,ಮದರಸ ವಿಧ್ಯಾರ್ಥಿ ಗಳ ಮೇಲಿನ ಹಲ್ಲೆ ಆಗಿರುತ್ತದೆ ಎಂದು ಭಾವಿಸಬೆಕಾಗುತ್ತದೆ.
ಮತೀಯ ಉದ್ವಿಗ್ನತೆ ಸೃಷ್ಟಿಸುವ ಹುನ್ನಾರ ಇದಾಗಿರುತ್ತದೆ. ಇದರ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಬೇಕಿದೆ. ವಿದ್ಯಾರ್ಥಿ ಶಯಾನ್ ಭೇಟಿ ಸಂದರ್ಭದಲ್ಲಿ ಅಬ್ದುಲ್ ಜಲೀಲ್ ಕೃಷ್ಣಾಪುರ(ಅದ್ದು) , ಆಯಾಝ್, ಸಿ. ಎಂ.ಮುಸ್ತಾಫಾ, ಅಹಮದ್ ಬಾವ ಬಜಾಲ್, ಹಿದಾಯತ್ ಸುರತ್ಕಲ್ ಉಪಸ್ತಿತರಿದ್ದರು.
ಕೆ.ಅಶ್ರಫ್.
ಅಧ್ಯಕ್ಷರು. ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ