ಪುತ್ತೂರು: SMA ಈಸ್ಟ್ ಜಿಲ್ಲೆಯ ವತಿಯಿಂದ ಇಂದು ಪುತ್ತೂರು ಸುನ್ನಿ ಸೆಂಟನ್ನಲ್ಲಿ. SMA ಝೋನಲ್ ಪದಾಧಿಕಾರಿಗಳ ಸಂಗಮ ಜರುಗಿತ್ತು. ಈ ಸಂದರ್ಭದಲ್ಲಿ ದ.ಕ ಜಿಲ್ಲೆಯ
ಕೃಷ್ಣಾಪುರ 6ನೇ ಬ್ಲಾಕ್ ಬದ್ರಿಯಾ ಮದರಸ ವಿದ್ಯಾರ್ಥಿ ಶಯಾನ್ ಎಂಬ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿದ ಕೃತ್ಯ ಖಂಡನೀಯ.
ದ.ಕ ಜಿಲ್ಲೆಯಲ್ಲಿ ಪದೇಪದೇ ಮಸೀದಿ ಮದರಸ ವಿದ್ಯಾರ್ಥಿಗಳನ್ನು ಗುರಿಯಾಗಿರಿಸಿ ಇಂಥ ಕೃತ್ಯಗಳು ನಡೆಯುತ್ತಲೇ ಇದೆ ಈ ಬಗ್ಗೆ ಪೊಲೀಸ್ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ದುಷ್ಕರ್ಮಿಗಳನ್ನು ಪತ್ತೆಹಚ್ಚಿ ವಿದ್ಯಾರ್ಥಿಗೆ ನ್ಯಾಯ ಒದಗಿಸಬೇಕು ಎಂದು ಸಭೆ ಒತ್ತಾಯಿಸಿತ್ತು. ಜಿಲ್ಲಾಧ್ಯಕ್ಷರಾದ ಸೈಯದ್ ಸಾದತ್ ತಂಙಳ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ SMA ರಾಜ್ಯ ಉಪಾಧ್ಯಕ್ಷರಾದ ಹಾಜಿ ಹಮೀದ್ ಕೊಡಂಗಾಯಿ ಮದರಸ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಸಹಿಸಲು ಸಾಧ್ಯವಿಲ್ಲ ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಮದ್ರಸಾ ಆಡಳಿತ ಸಮಿತಿ ವಿದ್ಯಾರ್ಥಿಗಳ ಪೋಷಕರು ಈ ಬಗ್ಗೆ ಜಾಗುರುತರಗಬೇಕು ಸರ್ಕಾರ ದುಷ್ಕರ್ಮಿಗಳ ಅಟ್ಟಹಾಸ ಕಡಿವಾನ ಹಾಕಿ ನಿಲ್ಲಿಸದಿದ್ದಲ್ಲಿ ಹೋರಾಟ ಅನಿವಾರ್ಯ ಎಂದರು ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಕಬಕ ಸಭೆಯನ್ನು ಉಧ್ಘಾಟಿಸಿದರು.
ಪ್ರಸ್ತುತ ಸಭೆಯಲ್ಲಿ ಬೆಳ್ಳಾರೆ ಝೋನಲ್ ಅಧ್ಯಕ್ಷರಾದ ಜನಾಬ್ ಇಬ್ರಾಹಿಂ ಬೀಡು ಕಾರ್ಯದರ್ಶಿ ಹಮೀದ್ ಸುಣ್ಣಮೂಲೆ ಕೋಶಾಧಿಕಾರಿ ಅಬೂಬಕ್ಕರ್ ಹಾಜಿ ವಿಟ್ಲ ಝೋನಲ್ ಕಾರ್ಯದರ್ಶಿ ಖಾಸಿಂ ಸಖಾಫಿ ಉಪ್ಪಿನಂಗಡಿ ಝೋನಲ್ ಅಧ್ಯಕ್ಷರಾದ ಜನಾಬ್ ಮುಹಮ್ಮದ್ ಹಾಜಿ ಕಾರ್ಯದರ್ಶಿ ಮಜೀದ್ ಅಹ್ಸನಿ ಕೋಶಾಧಿಕಾರಿ ರಮ್ಲಾನ್ ನೆಕ್ಕಿಲ್ ಉಜಿರೆ ಝೋನಲ್ ಅಧ್ಯಕ್ಷರಾದ ಜನಾಬ್ ಹಮೀದ್ ಮುಂಡಾಜೆ ಜಿಲ್ಲಾ ಉಪಾಧ್ಯಕ್ಷರಾದ ಜನಾಬ್ ಇಸ್ಮಾಯಿಲ್ ಉಳ್ತೂರು ಕಾರ್ಯದರ್ಶಿ ಮುಹಮ್ಮದ್ ಕಾಜೂರು ಹಾಗೂ ಹಲವಾರು ಕಾರ್ಯಕರ್ತರು ಬಾಗವಹಿಸಿದ್ದರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಶ್ರಫ್ ಹಿಮಮಿ ಉಜಿರೆ ಸ್ವಾಗತಿಸಿ ಮುಹಮ್ಮದ್ ಬಶೀರ್ ಮದನಿ ಜಾರಿಗೆಬೈಲು ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)