janadhvani

Kannada Online News Paper

ಕೆಸಿಎಫ್ ಒಮಾನ್ ಪ್ರಾಯೋಜಕತ್ವದ ಮಾಝಿನ್ ಹೆರಿಟೇಜ್ ಜುಲೈ 13 ಕ್ಕೆ ಉದ್ಘಾಟನೆ

ಕರ್ನಾಟಕ ಕಲ್ಚರಲ್ ಫೌಂಡೇಷನ್ KCF ಒಮಾನ್ ಪ್ರಾಯೋಜಕತ್ವದ ಇಹ್ಸಾನ್ ಕರ್ನಾಟಕ ಎಜು & ಚಾರಿಟೇಬಲ್ ಟ್ರಸ್ಟ್ , ದಾರುಲ್ ಉಲೂಮ್ ಇಹ್ಸಾನಿಯ್ಯ ಇದರ ಉದ್ಘಾಟನೆಯನ್ನು ಜುಲೈ 13 ರಂದು ಹಝ್ರತ್ ಮುಹಮ್ಮದ್‌ ಫಾಝಿಲ್ ರಝ್ವಿ ಕಾವಲ್ ಕಟ್ಟೆ ಇವರು ನೆರವೇರಿಸಲಿದ್ದಾರೆ. ಇಹ್ಸಾನ್ ಕರ್ನಾಟಕ ಇದರ ಅಧ್ಯಕ್ಷ ರಾದ ಬಹು ಎಂ ಐ ಅಬ್ದುಲ್ ಹಫೀಝ್ ಸ ಅದಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನ ಶಾಫಿ ಸ ಅದಿ ಇವರು ನೆರವೇರಿಸಲಿದ್ದಾರೆ.

ಕಾರ್ಯಕ್ರಮ ದಲ್ಲಿ KCF ಅಂತರರಾಷ್ಟ್ರೀಯ ಸಮಿತಿ ಅಧ್ಯಕ್ಷ ಹಾಜಿ ಶೈಖ್ ಬಾವ , KCF ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಜನಾಬ್ ಅಯ್ಯೂಬ್ ಕೋಡಿ , KCF ಅಂತರರಾಷ್ಟ್ರೀಯ ಸಮಿತಿಯ ಇಹ್ಸಾನ್ ವಿಭಾಗದ ಅಧ್ಯಕ್ಷ ಹಾಜಿ ಅಬೂಬಕ್ಕರ್ ರೈಸ್ಕೊ, SYS ರಾಜ್ಯಾಧ್ಯಾಕ್ಷ ಡಾ. ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ, SSF ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸ ಅದಿ, ಸ್ಥಳೀಯ ಶಾಸಕ ಎಸ್. ವಿ. ರಾಮಚಂದ್ರ,
ಇಹ್ಸಾನ್ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಬಜ್ಪೆ, ಸಯ್ಯದ್ ಸೈಫುದ್ದೀನ್ ಅಲ್ ಹೈದ್ರೋಸಿ ತಂಙಳ್ ಕೊಡಗು,
SJM ರಾಜ್ಯಾಧ್ಯಕ್ಷ ಅಬ್ದುರ್ರಹ್ಮಾನ್ ಮದನಿ ಜೆಪ್ಪು, ಮಝಿನ್ ಹೆರಿಟೇಜ್ ಕಟ್ಟಡ ನಿರ್ಮಾಣ ಸಮಿತಿ ಚಯರ್ಮೆನ್ ಇಕ್ಬಾಲ್ ಬೊಲ್ಮಾರ್ ಬರ್ಕ, ಮಾಝಿನ್ ಹೆರಿಟೇಜ್ ಕಟ್ಟಡ ನಿರ್ಮಾಣ ಸಮಿತಿ ಕನ್ವೀನರ್ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ತಂಙಳ್ ಕೊಡಗು, KCF ಒಮಾನ್ ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ, KCF ಕೌನ್ಸಿಲರ್ ಇಬ್ರಾಹಿಮ್ ಹಾಜಿ ಅತ್ರಾಡಿ, KCF ಒಮಾನ್ ಇಮಾಮ್ ನವವಿ ಮದರಸ ಪ್ರಾಂಶುಪಾಲರಾದ ಉಬೈದುಲ್ಲಾ ಸಖಾಫಿ ಮಿತ್ತೂರು , ಇಹ್ಸಾನ್ ಕರ್ನಾಟಕ ಉಪಾಧ್ಯಕ್ಷ ಬಿ ಎ ಇಬ್ರಾಹಿಮ್ ಸಖಾಫಿ, ಇಹ್ಸಾನ್ ಕರ್ನಾಟಕ ಕಾರ್ಯದರ್ಶಿ ಶಾಹುಲ್ ಹಮೀದ್ ಮುಸ್ಲಿಯಾರ್ ಶಿವಮೊಗ್ಗ, ಇಹ್ಸಾನ್ ಕರ್ನಾಟಕ ಕೋಶಾಧಿಕಾರಿ ಅಬ್ದುಲ್ ರಹಮಾನ್ ರಝ್ವಿ ಕಲ್ ಕಟ್ಟ,
ಇಹ್ಸಾನ್ ಕರ್ನಾಟಕ ದಾಯಿ ಮುಹಮ್ಮದ್‌ ಇಸ್ಹಾಕ್ ಸಖಾಫಿ, ರಾಜ್ಯ ವಕ್ಫ್ ಸದಸ್ಯ ಜನಾಬ್ ಯಾಕೂಬ್ ಹೊಸನಗರ, ಇಹ್ಸಾನ್ ನಾಯಕರಾದ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಇಸ್ಮಾಯಿಲ್ ಸ ಅದಿ ಕಿನ್ಯ, ಹಮೀದ್ ಮಡಿಕೇರಿ, ಸಿರಾಜುದ್ದೀನ್ ಸಖಾಫಿ ಕನ್ಯಾನ, ಅಬ್ದುರಹ್ಮಾನ್ ಮೊಗರ್ಪಣೆ ಸುಳ್ಯ,
ಮಾಝಿನ್ ಹೆರಿಟೇಜ್ ಕಟ್ಟಡ ಕಾಮಗಾರಿಯ ಕಾಂಟ್ರಾಕ್ಟರ್ ಜನಾಬ್ ಅಕ್ಬರ್ ಉಪ್ಪಳ್ಳಿ ಹಾಗೂ KCF ಒಮಾನ್ ರಾಷ್ಟ್ರೀಯ , ಝೋನ್, ಸೆಕ್ಟರ್ ನಾಯಕರು, ಸದಸ್ಯರು, SYS ,SSF ನಾಯಕರು ಮತ್ತು ಸದಸ್ಯರು ಭಾಗವಹಿಸಲಿದ್ದಾರೆ ಎಂದು KCF ಒಮಾನ್ ಮೀಡಿಯಾ ವಿಭಾಗದ ಅಧ್ಯಕ್ಷ ಸಿದ್ದೀಕ್ ಮಾಂಬ್ಲಿ‌ ಸುಳ್ಯ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿರಿ...