ಕೆಸಿಎಫ್ ಜಿದ್ದಾ ಝೋನ್ ಅಧೀನದ ಶರಫಿಯ್ಯಾ ಸೆಕ್ಟರ್ ವ್ಯಾಪ್ತಿಯ ಬನೀಮಾಲಿಕ್ ಯುನಿಟಿನ ಸಕ್ರಿಯ ಕಾರ್ಯಕರ್ತ ಮುಹಮ್ಮದ್ ಉಮ್ಮರ್ ಕುಂಞಿ ಸಾಲೆತ್ತೂರ್ ರವರು ದಿನಾಂಕ 11-07-2022 ರಂದು ಕುಮ್ರಾದ ತನ್ನ ವಾಸಸ್ಥಾನದಲ್ಲಿ ಹ್ರದಯಾಘಾತದಿಂದ ಮರಣಹೊಂದಿದ್ದರು.
ವಿಷಯ ತಿಳಿದ ಕೆಸಿಎಫ್ ಜಿದ್ದಾ ಝೊನಲ್ ಸಾಂತ್ವನ ಇಲಾಖೆಯ ನೇತಾರರಾದ ನಾಸೀರ್ ಹೆಚ್ಕಲ್ ಮದೀನಾ ಝೋನಲ್ ನೇತಾರರಾದ ರಝಾಕ್ ಉಳ್ಳಾಲ ಮತ್ತು ಮ್ರತರ ಸಂಬಂಧಿ ರಫೀಕ್ ಕುಕ್ಕಾಜೆಯವರ ಸಹಕಾರದೊಂದಿಗೆ ಭಾರತೀಯ ರಾಯಭಾರಿ ಮತ್ತು ಆಸ್ಪತ್ರೆಯ ಎಲ್ಲಾ ದಾಖಲೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಯಶಸ್ವಿಯಾಗಿದ್ದಾರೆ.
ಅಲ್ಲಾಹನ ಅಪಾರವಾದ ಅನುಗ್ರಹದಿಂದ 13/07/2022 ರಂದು ಲುಹ್ರ್ ನಮಾಝ್ ಸಮಯಕ್ಕೆ ಜಿದ್ದಾದಲ್ಲಿರುವ ಬಾಬುಮಕ್ಕಾದ ಅಲ್ – ಅಸದ್ ಮಕ್ಬರದಲ್ಲಿ ಎಲ್ಲಾ ವಿಧಿವಿಧಾನಗಳೊಂದಿಗೆ ಸಯ್ಯಿದ್ ಅಬ್ದುರ್ರಹ್ಮಾನ್ ತಂಙಳ್ ಉಚ್ಚಿಲ, ಸಯ್ಯಿದ್ ನಾಫೀ ತಂಙಳ್ ನೂಜಿ, ಫಾರೂಕ್ ಸ಼ಅದಿ ಹೆಚ್ಕಲ್ ರವರ ನೇತೃತ್ವದಲ್ಲಿ ದಫನ ಕ್ರಿಯೆ ನಡೆಸಲಾಯಿತು.
ಕೆಸಿಎಫ್ ರಾಷ್ಟ್ರೀಯ ಸಮಿತಿಯ ನೇತಾರರು, ಜಿದ್ದಾ ಝೋನ್ ಸಮಿತಿಯ ನೇತಾರರು, ಸೆಕ್ಟರ್ ಮತ್ತು ಯುನಿಟ್ ಗಳ ನೇತಾರರು ಸೇರಿದಂತೆ ಹಲವಾರು ಕಾರ್ಯಕರ್ತರು ಧಫನ ಸಮಯದಲ್ಲಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ