ಕೆಸಿಎಫ್ ಜಿದ್ದಾ ಝೋನ್ ಅಧೀನದ ಶರಫಿಯ್ಯಾ ಸೆಕ್ಟರ್ ವ್ಯಾಪ್ತಿಯ ಬನೀಮಾಲಿಕ್ ಯುನಿಟಿನ ಸಕ್ರಿಯ ಕಾರ್ಯಕರ್ತ ಮುಹಮ್ಮದ್ ಉಮ್ಮರ್ ಕುಂಞಿ ಸಾಲೆತ್ತೂರ್ ರವರು ದಿನಾಂಕ 11-07-2022 ರಂದು ಕುಮ್ರಾದ ತನ್ನ ವಾಸಸ್ಥಾನದಲ್ಲಿ ಹ್ರದಯಾಘಾತದಿಂದ ಮರಣಹೊಂದಿದ್ದರು.
ವಿಷಯ ತಿಳಿದ ಕೆಸಿಎಫ್ ಜಿದ್ದಾ ಝೊನಲ್ ಸಾಂತ್ವನ ಇಲಾಖೆಯ ನೇತಾರರಾದ ನಾಸೀರ್ ಹೆಚ್ಕಲ್ ಮದೀನಾ ಝೋನಲ್ ನೇತಾರರಾದ ರಝಾಕ್ ಉಳ್ಳಾಲ ಮತ್ತು ಮ್ರತರ ಸಂಬಂಧಿ ರಫೀಕ್ ಕುಕ್ಕಾಜೆಯವರ ಸಹಕಾರದೊಂದಿಗೆ ಭಾರತೀಯ ರಾಯಭಾರಿ ಮತ್ತು ಆಸ್ಪತ್ರೆಯ ಎಲ್ಲಾ ದಾಖಲೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಯಶಸ್ವಿಯಾಗಿದ್ದಾರೆ.
ಅಲ್ಲಾಹನ ಅಪಾರವಾದ ಅನುಗ್ರಹದಿಂದ 13/07/2022 ರಂದು ಲುಹ್ರ್ ನಮಾಝ್ ಸಮಯಕ್ಕೆ ಜಿದ್ದಾದಲ್ಲಿರುವ ಬಾಬುಮಕ್ಕಾದ ಅಲ್ – ಅಸದ್ ಮಕ್ಬರದಲ್ಲಿ ಎಲ್ಲಾ ವಿಧಿವಿಧಾನಗಳೊಂದಿಗೆ ಸಯ್ಯಿದ್ ಅಬ್ದುರ್ರಹ್ಮಾನ್ ತಂಙಳ್ ಉಚ್ಚಿಲ, ಸಯ್ಯಿದ್ ನಾಫೀ ತಂಙಳ್ ನೂಜಿ, ಫಾರೂಕ್ ಸ಼ಅದಿ ಹೆಚ್ಕಲ್ ರವರ ನೇತೃತ್ವದಲ್ಲಿ ದಫನ ಕ್ರಿಯೆ ನಡೆಸಲಾಯಿತು.
ಕೆಸಿಎಫ್ ರಾಷ್ಟ್ರೀಯ ಸಮಿತಿಯ ನೇತಾರರು, ಜಿದ್ದಾ ಝೋನ್ ಸಮಿತಿಯ ನೇತಾರರು, ಸೆಕ್ಟರ್ ಮತ್ತು ಯುನಿಟ್ ಗಳ ನೇತಾರರು ಸೇರಿದಂತೆ ಹಲವಾರು ಕಾರ್ಯಕರ್ತರು ಧಫನ ಸಮಯದಲ್ಲಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ