ನವದೆಹಲಿ, ಏ.17:- ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಎಟಿಎಂಗಳು ಖಾಲಿ ಖಾಲೆ ಹೊಡೆಯುತ್ತಿದ್ದು, ಎಲ್ಲೆಡೆ ನೋ ಕ್ಯಾಶ್ ನಾಮಫಲಕ ಹಾಕಲಾಗಿತ್ತು.
ಹಣವಿರುವ ಎಟಿಎಂಗಳ ಮುಂದೆ ಜನರು ಸರದಿ ಸಾಲಿನಲ್ಲಿ ಸಾಲುಗಟ್ಟಿ ನಿಂತಿದ್ದು, ತಮ್ಮ ಹಣವನ್ನು ತೆಗೆದುಕೊಳ್ಳಲು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ.
ಕರ್ನಾಟಕದ ಮಾತ್ರವಲ್ಲದೆ ರಾಷ್ಟ್ರ ರಾಜಧಾನಿ ದೆಹಲಿ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಗುಜರಾತ್, ಬಿಹಾರ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಹೀಗೆ ಹಲವು ರಾಜ್ಯಗಳಲ್ಲಿ ಇದೇ ಪರಿಸ್ಥಿತಿ ಮುಂದುವರೆದಿದ್ದು, ನಾಗರಿಕರು ಎಟಿಎಂ ಮುಂದೆ ಹೋಗಿ ನೋ ಕ್ಯಾಶ್ ಹಾಗೂ ನಾಟ್ ವರ್ಕಿಂಗ್ ಬೋರ್ಡುಗಳನ್ನು ನೋಡಿ ಸಪ್ಪೆ ಮುಖ ಹಾಕಿಕೊಂಡು ವಾಪಸ್ ಬರುತ್ತಿದ್ದಾರೆ.
ದೊಡ್ಡ ದೊಡ್ಡ ಮೊತ್ತದಿರಲಿ, ಕಡಿಮೆ ಮೊತ್ತ ಡ್ರಾ ಮಾಡಿಕೊಳ್ಳಲು ಎಟಿಎಂ ಮುಂದೆ ಸಾಲುಗಟ್ಟಿ ಜನ ನಿಂತಿದ್ದಾರೆ. ಆ ಹಣವನ್ನೂ ಪಡೆಯಲಾಗದಂತ ಸ್ಥಿತಿಗೆ ತಲುಪವಾಗಿದೆ. ಬಹುತೇಕ ಎಟಿಎಂಗಳು ನೋ ಕ್ಯಾಶ್ ಬೋರ್ಡ್ ಕಾಣುತ್ತಿದ್ದು, ಕೆಲ ಎಟಿಎಂಗಳಲ್ಲಿ ಹಣ ತುಂಬಿದ ಕೆಲವೇ ನಿಮಿಷಗಳಲ್ಲಿ ಹಣ ಖಾಲಿಯಾಗುತ್ತಿದೆ.
ಹೀಗಾಗಿ, ಎಟಿಎಂಗಳ ಮುಂದೆ ಗಂಟೆಗಟ್ಟಲೆ ಸರದಿ ಸಾಲಿನಲ್ಲಿ ನಿಂತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
ಸಾರ್ವಜನಿಕರ ಆಕ್ರೋಶ: ದೇಶದ ವಿವಿಧ ರಾಜ್ಯಗಳಲ್ಲಿ ಎಟಿಎಂಗಳು ಖಾಲಿ ಖಾಲಿ ಹೊಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತೀವ್ರ ಅಸಮಾಧಾನ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಟಿಎಂ ಮುಂದೆ ಹಾಕಲಾಗಿರುವ ನೋ ಕ್ಯಾಶ್ ಹಾಗೂ ನಾಟ್ ವರ್ಕಿಂಗ್ ಬೋರ್ಡುಗಳ ಫೋಟೊ ತೆಗೆದುಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ