ಕಣ್ಣೂರು(ಕೇರಳ) :ಇಲ್ಲಿನ ಮುಹ್ಯುದ್ದೀನ್ ಮಸೀದಿಗೆ ಸಗಣಿ ಎರಚಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಇರಿನಾವ್ ಮೂಲದ ದಸ್ತಗೀರ್ ಬಂಧಿತ ಆರೋಪಿ. ಈತ ಮಾನಸಿಕ ಅಸ್ವಸ್ಥನೆಂದು ಶಂಕಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಆರ್. ಇಳಂಗೋ ಹೇಳಿದರು. ಘಟನೆ ಪೂರ್ವ ಯೋಜಿತವಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಕಣ್ಣೂರು ಮಾರುಕಟ್ಟೆಯ ಮುಹ್ಯಿದ್ದೀನ್ ಮಸೀದಿಯಲ್ಲಿ ಸಗಣಿ ಪತ್ತೆಯಾಗಿತ್ತು.ಮಸೀದಿಯ ಮಿಹ್ರಾಬ್ ಮತ್ತು ಮಿಂಬರ್ ನಡುವೆ ಮತ್ತು ಮಸೀದಿಯ ಹೊರಗೆ ಸಗಣಿ ಕಂಡುಬಂದಿದೆ. ಶುದ್ಧೀಕರಣಕ್ಕೆ ಬಳಸುವ ನೀರಿನ ಹೌಲ್ ನಲ್ಲೂ ಸಗಣಿಯನ್ನು ಬೆರೆಸಲಾಗಿತ್ತು.
ಶುಕ್ರವಾರದ ಪ್ರಾರ್ಥನೆ ಮುಗಿಸಿ ವಿಶ್ವಾಸಿಗಳು ಮಸೀದಿಯಿಂದ ಹೊರಬಂದ ಬಳಿಕ ಈ ಘಟನೆ ನಡೆದಿದೆ. ಮಸೀದಿಯ ಉದ್ಯೋಗಿ ಅಬ್ದುಲ್ ಅಝೀಝ್ ಅವರು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೊದಲ ಬಾರಿಗೆ ಮಸೀದಿಯೊಳಗೆ ಸಗಣಿಯನ್ನು ಕಂಡಿದ್ದು, ನಂತರ ಮಸೀದಿಯ ಆಡಳಿತ ಸಮಿತಿಗೆ ತಿಳಿಸಿದ್ದರು.
ಮೂವರ ಗುಂಪು ಸಗಣಿ ಎರಚಿದೆ ಎಂದು ಪ್ರಾಥಮಿಕವಾಗಿ ಆರೋಪಿಸಲಾಗಿತ್ತು. ಘಟನೆಯ ನಂತರ ಕಣ್ಣೂರು ಡಿಐಜಿ ರಾಹುಲ್ ಆರ್. ನಾಯರ್, ನಗರ ಪೊಲೀಸ್ ಆಯುಕ್ತ ಆರ್. ಇಳಂಗೋ ಮತ್ತಿತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಇದರಿಂದ ಸಿಕ್ಕ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ