ಕಣ್ಣೂರು(ಕೇರಳ) :ಇಲ್ಲಿನ ಮುಹ್ಯುದ್ದೀನ್ ಮಸೀದಿಗೆ ಸಗಣಿ ಎರಚಿದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಇರಿನಾವ್ ಮೂಲದ ದಸ್ತಗೀರ್ ಬಂಧಿತ ಆರೋಪಿ. ಈತ ಮಾನಸಿಕ ಅಸ್ವಸ್ಥನೆಂದು ಶಂಕಿಸಿರುವುದಾಗಿ ನಗರ ಪೊಲೀಸ್ ಆಯುಕ್ತ ಆರ್. ಇಳಂಗೋ ಹೇಳಿದರು. ಘಟನೆ ಪೂರ್ವ ಯೋಜಿತವಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಕಣ್ಣೂರು ಮಾರುಕಟ್ಟೆಯ ಮುಹ್ಯಿದ್ದೀನ್ ಮಸೀದಿಯಲ್ಲಿ ಸಗಣಿ ಪತ್ತೆಯಾಗಿತ್ತು.ಮಸೀದಿಯ ಮಿಹ್ರಾಬ್ ಮತ್ತು ಮಿಂಬರ್ ನಡುವೆ ಮತ್ತು ಮಸೀದಿಯ ಹೊರಗೆ ಸಗಣಿ ಕಂಡುಬಂದಿದೆ. ಶುದ್ಧೀಕರಣಕ್ಕೆ ಬಳಸುವ ನೀರಿನ ಹೌಲ್ ನಲ್ಲೂ ಸಗಣಿಯನ್ನು ಬೆರೆಸಲಾಗಿತ್ತು.
ಶುಕ್ರವಾರದ ಪ್ರಾರ್ಥನೆ ಮುಗಿಸಿ ವಿಶ್ವಾಸಿಗಳು ಮಸೀದಿಯಿಂದ ಹೊರಬಂದ ಬಳಿಕ ಈ ಘಟನೆ ನಡೆದಿದೆ. ಮಸೀದಿಯ ಉದ್ಯೋಗಿ ಅಬ್ದುಲ್ ಅಝೀಝ್ ಅವರು ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೊದಲ ಬಾರಿಗೆ ಮಸೀದಿಯೊಳಗೆ ಸಗಣಿಯನ್ನು ಕಂಡಿದ್ದು, ನಂತರ ಮಸೀದಿಯ ಆಡಳಿತ ಸಮಿತಿಗೆ ತಿಳಿಸಿದ್ದರು.
ಮೂವರ ಗುಂಪು ಸಗಣಿ ಎರಚಿದೆ ಎಂದು ಪ್ರಾಥಮಿಕವಾಗಿ ಆರೋಪಿಸಲಾಗಿತ್ತು. ಘಟನೆಯ ನಂತರ ಕಣ್ಣೂರು ಡಿಐಜಿ ರಾಹುಲ್ ಆರ್. ನಾಯರ್, ನಗರ ಪೊಲೀಸ್ ಆಯುಕ್ತ ಆರ್. ಇಳಂಗೋ ಮತ್ತಿತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಇದರಿಂದ ಸಿಕ್ಕ ಮಾಹಿತಿ ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ