ಬೆಂಗಳೂರು,ಜುಲೈ.17: ಬೆಲೆಯೇರಿಕೆಯನ್ನೇ ಬಂಡವಾಳವಾಗಿಸಿರುವ ಕೇಂದ್ರದ ಬಿಜೆಪಿ ಸರ್ಕಾರವು ಬಡವರ ನಿತ್ಯ ಜೀವನವನ್ನೇ ಬುಡಮೇಲು ಮಾಡಿದೆ. ದೇಶದ ಶ್ರೀ ಸಾಮಾನ್ಯರಿಗೆ ಕೇಂದ್ರ ಸರ್ಕಾರ ಈಗ ಮತ್ತೊಂದು ಶಾಕ್ ಕೊಟ್ಟಿದೆ. ನಾಳೆಯಿಂದ ಅಗತ್ಯ ವಸ್ತುಗಳು, ಆಹಾರ ವಸ್ತುಗಳ ಮೇಲೆ ಜಿಎಸ್ಟಿ ಬರೆ ಬೀಳ್ತಿದ್ದು, ದುನಿಯಾ ಮತ್ತಷ್ಟು ದುಬಾರಿಯಾಗಲಿದೆ. ಕಳೆದ ತಿಂಗಳು ನಡೆದ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಆಹಾರ ಉತ್ಪನ್ನಗಳ ಮೇಲೆ ಜಿಎಸ್ಟಿ ವಿಧಿಸಲು ನಿರ್ಧರಿಸಲಾಗಿದೆ.
ಯಾವುದೆಲ್ಲಾ ದುಬಾರಿ?
- ಪ್ಯಾಕ್ ಮಾಡಿದ ಆಹಾರ ವಸ್ತು. ( ಮೀನು, ಮಾಂಸ, ಒಣಗಿಸಿದ ತರಕಾರಿ, ಜೇನುತುಪ್ಪ, ಬೆಲ್ಲ, ತುಪ್ಪ, ಅಕ್ಕಿ, ಗೋಧಿ ಸೇರಿ ಇತರೆ ಧಾನ್ಯಗಳು) ದುಬಾರಿಯಾಗಲಿವೆ.
- ಎಲ್ಇಡಿ ಬಲ್ಬ್, ಲ್ಯಾಂಪ್ಗಳ ಮೇಲೂ 18 ಪರ್ಸೆಂಟ್ನಷ್ಟು ಜಿಎಸ್ಟಿ ವಿಧಿಸಲಾಗಿದೆ.
- ಅಸ್ಪತ್ರೆಯಲ್ಲಿ 5 ಸಾವಿರ ರೂಪಾಯಿ ಮೇಲ್ಪಟ್ಟ ಸ್ಪೆಷಲ್ ವಾರ್ಡ್ಗೂ 5 ಪರ್ಸೆಂಟ್ ತೆರಿಗೆ ಬೀಳಲಿದೆ.
- ಚೆಕ್ ಬುಕ್ ಜಾರ್ಜ್ ಕೂಡಾ 18 ಪರ್ಸೆಂಟ್ ಹೆಚ್ಚಾಗಲಿದೆ.
- 1 ಸಾವಿರ ರೂಪಾಯಿ ಒಳಗಿನ ಹೋಟೆಲ್ ರೂಮ್ಗಳಿಗೂ 12 ಪರ್ಸೆಂಟ್ ಜಿಎಸ್ಟಿ ಇರಲಿದೆ.
- ಕ್ಯಾಸಿನೋ, ಆನ್ಲೈನ್ ಗೇಮ್ ಆಡೋರಿಗೂ ಟ್ಯಾಕ್ಸ್ ಬರೆ ಬಿದ್ದಿದ್ದು, ಬರೋಬ್ಬರಿ 28 ಪರ್ಸೆಂಟ್ ಜಿಎಸ್ಟಿ ಹಾಕಲಾಗಿದೆ.
- ಇನ್ನುಳಿದಂತೆ, ಸೋಲಾರ್ ವಾಟರ್ ಹೀಟರ್, ಇಂಕ್, ಚರ್ಮದ ಉತ್ಪನ್ನ, ಟೈಲರಿಂಗ್, ಜವಳಿ ಸೇವೆ, ಬಾಡಿಗೆ ರೂಮ್ ನೀಡುವ ಧಾರ್ಮಿಕ ಕೇಂದ್ರಗಳು, ಬಾಡಿಗೆ ವಿಧಿಸುವ ವಾಣಿಜ್ಯ ಕೇಂದ್ರಗಳಿಗೂ ಟ್ಯಾಕ್ಸ್ ಹೊರೆಬಿದ್ದಿದೆ.
ಸದ್ಯದ ದರ ಹಾಗೂ ನಾಳೆ ಜಿಎಸ್ಟಿ ಸೇರಿಸಿದ್ರೆ ದರದ ಮಾಹಿತಿ
- ನಾಳೆಯಿಂದ ಮೊಸರು, ಮಜ್ಜಿಗೆ, ಲಸ್ಸಿ ಬೆಲೆ ಹೆಚ್ಚಳ
- ಅಕ್ಕಿ- 1 ಕೆಜಿಗೆ- 50 ರೂಪಾಯಿ, 10 ಕೆಜಿಗೆ- 500 ರೂಪಾಯಿ, ಜಿಎಸ್ಟಿ ಸೇರಿಸಿದ್ರೆ- 10 ಕೆಜಿಗೆ- 525, ರೂಪಾಯಿ 5%
- ಹೆಸರು ಬೆಳೆ- 1 ಕೆಜಿಗೆ- 110 ರೂಪಾಯಿ, 10 ಕೆಜಿಗೆ- 1100 ರೂಪಾಯಿ. ಜಿಎಸ್ಟಿ ಸೇರಿಸಿದ್ರೆ- 1155
- ತೊಗರಿಬೆಳೆ- ಕೆಜಿಗೆ- 100 ರೂಪಾಯಿ, 10 ಕೆಜಿಗೆ- 1000 ರೂಪಾಯಿ. ಜಿಎಸ್ಟಿ ಸೇರಿಸಿದ್ರೆ- 1050 ರುಪಾಯಿ
- ಉದ್ದಿನಬೆಳೆ ಕೆಜಿಗೆ- 120 ರೂಪಾಯಿ, 10 ಕೆಜಿಗೆ- 1200 ರೂಪಾಯಿ. ಜಿಎಸ್ಟಿ ಸೇರಿಸಿದ್ರೆ- 1260
- ಹೆಸರು ಕಾಲು ಕೆಜಿಗೆ- 100 ರೂಪಾಯಿ, 10 ಕೆಜಿಗೆ- 1000. ಜಿಎಸ್ಟಿ ಸೇರಿಸಿದ್ರೆ- 1050 ರೂಪಾಯಿ
- ಕಡಲೆ ಬೇಳೆ ಕೆಜಿಗೆ- 75 ರೂಪಾಯಿ, 10 ಕೆಜಿಗೆ- 750 ರೂಪಾಯಿ. ಜಿಎಸ್ಟಿ ಸೇರಿಸಿದ್ರೆ- 787
- ಕಡಲೆಕಾಳು ಕೆಜಿಗೆ- 65 ರೂಪಾಯಿ, 10 ಕೆಜಿಗೆ- 650 ರೂಪಾಯಿ. ಜಿಎಸ್ಟಿ ಸೇರಿಸಿದ್ರೆ- 682 ರೂಪಾಯಿ
- ಹುರಿಕಡಲೆ ಕೆಜಿಗೆ- 80 ರೂಪಾಯಿ, 10 ಕೆಜಿಗೆ- 800 ರೂಪಾಯಿ. ಜಿಎಸ್ಟಿ ಸೇರಿಸಿದ್ರೆ-840
- ಉದ್ದಿನ ಕಾಲು- 110 ರೂಪಾಯಿ, 10 ಕೆಜಿಗೆ- 1100 ರೂಪಾಯಿ. ಜಿಎಸ್ಟಿ ಸೇರಿಸಿದ್ರೆ- 1155 ರೂಪಾಯಿ
- ಹಲಸಂದೆ ಕಾಲು ಕೆಜಿಗೆ- 90 ರೂಪಾಯಿ, 10 ಕೆಜಿಗೆ- 900 ರೂಪಾಯಿ. ಜಿಎಸ್ಟಿ ಸೇರಿಸಿದ್ರೆ- 945 ರೂಪಾಯಿ
- ಕಾಬೂಲ್ ಕಡಲೆ ಕೆಜಿಗೆ- 120 ರೂಪಾಯಿ, 10 ಕೆಜಿಗೆ- 1200. ಜಿಎಸ್ಟಿ ಸೇರಿಸಿದ್ರೆ- 1260
- ಬಟಾಣಿ ಕೆಜಿಗೆ- 85 ರೂಪಾಯಿ, 10 ಕೆಜಿಗೆ- 850 ರೂಪಾಯಿ. ಜಿಎಸ್ಟಿ ಸೇರಿಸಿದ್ರೆ- 892
- ಬೆಲ್ಲ ಕೆಜಿಗೆ- 60 ರೂಪಾಯಿ, 10 ಕೆಜಿಗೆ- 600 ರೂಪಾಯಿ. ಜಿಎಸ್ಟಿ ಸೇರಿಸಿದ್ರೆ- 630 ರೂಪಾಯಿ
- ಗೋದಿ ಹಿಟ್ಟು ಕೆಜಿಗೆ- 45 ರೂಪಾಯಿ, ಹತ್ತು ಕೆಜಿಗೆ-450 ರೂಪಾಯಿ. ಜಿಎಸ್ಟಿ ಸೇರಿಸಿದ್ರೆ-472 ರೂಪಾಯಿ
ಬಿಜೆಪಿ ಆಡಳಿತವಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲು ಮುಂದಾದರೆ, ಅವರ ಸೂರನ್ನೇ ನುಚ್ಚುನೂರು ಮಾಡುವ “ಬುಲ್ಡೋಜರ್ ರಾಜಕೀಯ” ವನ್ನು ಮುಂದಿಟ್ಟು, ಬಡ ಜನರ ಸದ್ದಡಿಗಿಸಲು ಸರ್ಕಾರ ಮುಂದಾಗಿದೆ.
ದೇಶದಲ್ಲಿನ ವಿರೋಧ ಪಕ್ಷಗಳು ಒಗ್ಗಟ್ಟಾಗಿ ಕೇಂದ್ರದ ಜನವಿರೋಧಿ ನೀತಿಯನ್ನು ಖಂಡಿಸಬೇಕಾದ ಅನಿವಾರ್ಯತೆ ಇದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ