ಮಂಗಳೂರು :ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಎಂಬಲ್ಲಿ ಮಸೂದ್ ಎಂಬ ಯುವಕನನ್ನು ಕ್ಷುಲ್ಲಕ ಕಾರಣ ಹೇಳಿ ಕೆಲವು ಗೂಂಡಾ ಶಕ್ತಿಗಳು ಕೋಮು ಭಾವನೆ ಕೆರಳಿಸುವ ನಿಟ್ಟಿನಲ್ಲಿ ಕೊಲೆ ನಡೆಸಿರುವುದು ಖಂಡನೀಯ,
ಜಿಲ್ಲೆಯಲ್ಲಿ ಕೊಲೆ, ಮಾದಕ ದ್ರವ್ಯದ ಜಾಲವು ತಾಂಡವಾಡುತ್ತಿವೆ. ಆದರೆ ಸರಕಾರ ಮತ್ತು ಅಧಿಕಾರಿಗಳು ಕಣ್ಣು ಕುರುಡರಂತೆ ವರ್ತಿಸುತ್ತಿರುವುದು ಖೇದಕರ ಸಂಗತಿಯಾಗಿದೆ.
ಆದ್ದರಿಂದ ಮಸೂದ್ ಹತ್ಯೆಯು ಯಾವ ಕಾರಣಕ್ಕಾಗಿ ನಡೆದಿದೆ ಎಂಬುದನ್ನು ಮೇಲಾಧಿಕಾರಿಗಳಿಂದ ಸಮಗ್ರ ತನಿಖೆ ನಡೆಸಿ,ಆ ಕುಟುಂಬಕ್ಕೆ ನ್ಯಾಯ ಒದಗಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕಿದೆ. ಅದೂ ಅಲ್ಲದೇ, ಮಸೂದ್ ಕುಟುಂಬಕ್ಕೆ ಸರಕಾರ 25 ಲಕ್ಷ ಪರಿಹಾರ ನೀಡಬೇಕು ಎಂದು SMA ರಾಜ್ಯ ಉಪಾಧ್ಯಕ್ಷರಾದ ಹಾಜಿ ಹಮೀದ್ ಕೊಡಂಗಾಯಿ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.






