ಮಂಗಳೂರು :ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಎಂಬಲ್ಲಿ ಮಸೂದ್ ಎಂಬ ಯುವಕನನ್ನು ಕ್ಷುಲ್ಲಕ ಕಾರಣ ಹೇಳಿ ಕೆಲವು ಗೂಂಡಾ ಶಕ್ತಿಗಳು ಕೋಮು ಭಾವನೆ ಕೆರಳಿಸುವ ನಿಟ್ಟಿನಲ್ಲಿ ಕೊಲೆ ನಡೆಸಿರುವುದು ಖಂಡನೀಯ,
ಜಿಲ್ಲೆಯಲ್ಲಿ ಕೊಲೆ, ಮಾದಕ ದ್ರವ್ಯದ ಜಾಲವು ತಾಂಡವಾಡುತ್ತಿವೆ. ಆದರೆ ಸರಕಾರ ಮತ್ತು ಅಧಿಕಾರಿಗಳು ಕಣ್ಣು ಕುರುಡರಂತೆ ವರ್ತಿಸುತ್ತಿರುವುದು ಖೇದಕರ ಸಂಗತಿಯಾಗಿದೆ.
ಆದ್ದರಿಂದ ಮಸೂದ್ ಹತ್ಯೆಯು ಯಾವ ಕಾರಣಕ್ಕಾಗಿ ನಡೆದಿದೆ ಎಂಬುದನ್ನು ಮೇಲಾಧಿಕಾರಿಗಳಿಂದ ಸಮಗ್ರ ತನಿಖೆ ನಡೆಸಿ,ಆ ಕುಟುಂಬಕ್ಕೆ ನ್ಯಾಯ ಒದಗಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕಿದೆ. ಅದೂ ಅಲ್ಲದೇ, ಮಸೂದ್ ಕುಟುಂಬಕ್ಕೆ ಸರಕಾರ 25 ಲಕ್ಷ ಪರಿಹಾರ ನೀಡಬೇಕು ಎಂದು SMA ರಾಜ್ಯ ಉಪಾಧ್ಯಕ್ಷರಾದ ಹಾಜಿ ಹಮೀದ್ ಕೊಡಂಗಾಯಿ ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ