ಸುಳ್ಯ ರಾಜಕೀಯ ಪಕ್ಷದ ಮುಖಂಡ ಪ್ರವೀಣ್ ನನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ್ದು ಖಂಡನೀಯ. ಜಿಲ್ಲೆಯಲ್ಲಿ ಮತೀಯ ಆಧಾರದಲ್ಲಿ ಇತ್ತೀಚೆಗೆ ದುರ್ಘಟನೆಗಳು ಸಂಭವಿಸುತ್ತಿರುವುದು ಅತ್ಯಂತ ಖೇದಕರವಾಗಿದೆ. ಇಂತಹ ಬೆಳವಣಿಗೆಗಳಿಂದ ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕಾಪಾಡುವಿಕೆಗೆ ತೀವ್ರ ಭಂಗವಾಗುತ್ತದೆ. ಸುಳ್ಯದಲ್ಲಿ ಇತ್ತೀಚೆಗೆ ಮಸೂದ್ ಎಂಬ ಯುವಕನು ಇಂತಹ ಕೃತ್ಯಕ್ಕೆ ಬಲಿಯಾಗಿದ್ದಾನೆ. ಮತೀಯ ದ್ವೇಷದಿಂದ ಎಂದಿಗೂ ಜನರ ಜೀವನ ಸುಗಮವಾಗಿ ನಡೆಯಲಾರದು.
ಜಿಲ್ಲಾಡಳಿತ,ಪೊಲೀಸರು ಮತ್ತು ಸರಕಾರ ಮತೀಯ ದ್ವೇಷಿತ ಅಪರಾಧದ ಆರೋಪಿಗಳನ್ನು ಬಂಧಿಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಮತ್ತು ಜಿಲ್ಲೆಯಲ್ಲಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಗುಪ್ತಚರ ಸಂಸ್ಥೆ ಗಳನ್ನು ಸಕ್ರಿಯ ಗೊಳಿಸಬೇಕು.ಸಾರ್ವಜನಿಕರು ಈ ಘಟನೆಯ ಬಗ್ಗೆ ಯಾವುದೇ ಊಹಾಪೋಹ ವದಂತಿಗಳಿಗೆ ಕಿವಿ ಹಚ್ಚಿ ಗೊಂದಲ ಸೃಷ್ಟಿ ಮಾಡಬಾರದು.ಪೊಲೀಸರು ಈ ಕೃತ್ಯದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಮತ್ತು ಕೃತ್ಯದ ಹಿಂದಿನ ಸತ್ಯಾಂಶವನ್ನು ಪ್ರಕಟಿಸಬೇಕು.ಪೊಲೀಸರು ಈ ಘಟನೆಯಲ್ಲಿ ಸಮಗ್ರ ಕೂಲಂಕುಷ ತನಿಖೆ ನಡೆಸುವ ಬಗ್ಗೆ ಭರವಸೆ ಹೊಂದಿದ್ದೇವೆ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ