ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸುಳ್ಯದ ಅಹಿತಕರ ಘಟನೆಗಳ ಬೆನ್ನಿಗೆ,ಇಂದು ಸುರತ್ಕಲ್ ನಲ್ಲಿ ಪೂರ್ವಯೋಜಿತ ವಾಗಿ ಮಂಗಳಪೇಟೆಯ ಫಾಝಿಲ್ ಎಂಬ ಯುವಕನನ್ನು ಅಂಗಡಿ ಮುಂಗಟ್ಟು ವಿನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ನಡೆಸಿದ್ದು ಖಂಡನೀಯ.
ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಕೋಮು ಪ್ರಚೋದಿತ ಘಟನೆಗಳು ನಿರಂತರ ಸಂಭವಿಸುತ್ತಿದ್ದು ಪೊಲೀಸು ಇಲಾಖೆಯ ಗುಪ್ತಚರ ವ್ಯವಸ್ಥೆ ಸಂಪೂರ್ಣ ವಿಫಲವಾಗಿ, ಸಂಭಾವ್ಯ ಅಹಿತಕರ ಘಟನೆಗಳನ್ನು ನಿರೀಕ್ಷಿಸುವ ಮಟ್ಟ ಸಂಪೂರ್ಣ ಕುಸಿದಿರುತ್ತದೆ. ಸುರತ್ಕಲ್ ನಲ್ಲಿ ನಡೆದ ಘಟನೆ ಅಮಾಯಕ ಯುವಕನ ಹತ್ಯೆ ಖಂಡನೀಯ. ಕ್ರಿಯೆಗೆ ಪ್ರತಿಕ್ರಿಯೆ ಖ್ಯಾತಿಯ ಮುಖ್ಯ ಮಂತ್ರಿ ಬೊಮ್ಮಾಯಿಯವರು ಜಿಲ್ಲೆಗೆ ಆಗಮಿಸಿದ ನಂತರ ನಡೆದ ಸುರತ್ಕಲ್ ಘಟನೆಗೂ ಅವರ ಹೇಳಿಕೆಗೂ ಸಾಮ್ಯತೆ ಕಾಣುತ್ತಿದೆ. ಈ ಘಟನೆಗೆ ಸರಕಾರ ಹೊಣೆ.ಪೊಲೀಸ್ ಉನ್ನತ ಅಧಿಕಾರಿಗಳು ಮದ್ಯ ಪ್ರವೇಶಿಸಿ ಸಾಮಾನ್ಯ ಜನರ ಪ್ರಾಣ ಆಸ್ತಿಗಳನ್ನು ರಕ್ಷಿಸಬೇಕಿದೆ.
ಕೆ.ಅಶ್ರಫ್.
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ