ಬೆಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಮುಹಮ್ಮದ್ ಫಾಝಿಲ್ ಎಂಬ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
‘ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ’ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಯ್ಯ ಹೇಳಿದ್ದಾರೆ.
ಈ ಸಂಬಂಧ ಸರಣಿ ಟ್ವಿಟ್ ಗಳನ್ನು ಮಾಡಿರುವ ಅವರು, ‘ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ’ ಎಂದು ಹೇಳಿದ್ದಾರೆ.
‘ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ.
ಮುಖ್ಯಮಂತ್ರಿಗಳು ಗೃಹಸಚಿವ ಸ್ಥಾನದಿಂದ ಆರಗ ಜ್ಞಾನೇಂದ್ರ ಅವರನ್ನು ತಕ್ಷಣ ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು’ ಆತಂಕ ವ್ಯಕ್ತಪಡಿಸಿದ್ದಾರೆ.
‘ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿರುವ ರಾಜ್ಯ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ’ ಎಂದು ಹೇಳಿದ್ದಾರೆ.
‘ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರು ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೆ ಕಿರುಕುಳ ನೀಡುವುದು ಸಲ್ಲದು’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರಿನ ಹೊರವಲಯದ ಸುರತ್ಕಲ್ ಮೂಡ ಮಾರುಕಟ್ಟೆ ಸಮೀಪ ಬಟ್ಟೆ ಅಂಗಡಿಯಲ್ಲಿದ್ದ ಮುಹಮ್ಮದ್ ಫಾಝಿಲ್ (23) ಎಂಬ ಯುವಕನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ