ಇಂದು ಸಿಟಿ ರವಿ ಮದರಸದ ಬಗ್ಗೆ ಅಸಂಭದ್ದ ಹೇಳಿಕೆ ನೀಡುತ್ತಿದ್ದಾರೆ. ಇತ್ತೀಚೆಗೆ ಸುಳ್ಯದ ಘಟನೆಯಿಂದ ಹಿಡಿದು ಸುರತ್ಕಲ್ ಹತ್ಯೆ ಯವರೆಗೆ, ಬೊಮ್ಮಾಯಿ ನೇತೃತ್ವದ ಸರ್ಕಾರ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಸಂರಕ್ಷಿಸುವ ನಿಟ್ಟಿನಲ್ಲಿ ಅನ್ಯಾಯವನ್ನೆ ಎಸಗಿದೆ.
ಮುಖ್ಯ ಮಂತ್ರಿ ಬೊಮ್ಮಾಯಿಯವರು ಮೃತ ಪ್ರವೀಣ್ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿ, ಸುಳ್ಯದ ಮಸೂದ್ ಮನೆಗೆ ಭೇಟಿ ನೀಡದೆ ಹಿಂತಿರುಗಿದ ಕಾರಣಕ್ಕಾಗಿಯೇ ಕ್ರಿಯೆಗೆ ಪ್ರತಿಕ್ರಿಯೆ ಖ್ಯಾತಿಯ ಮುಖ್ಯ ಮಂತ್ರಿ ನಡೆಯಿಂದಾಗಿ, ದುಷ್ಕರ್ಮಿಗಳು ನೈತಿಕವಾಗಿ ಮುಂದುವರಿದು ಸುರತ್ಕಲ್ ನಲ್ಲಿ ಫಾಝಿಲ್ ಎಂಬ ಯುವಕನನ್ನು ಹತ್ಯೆ ಮಾಡುವ ಕೃತ್ಯಕ್ಕೆ ಮುಖ್ಯ ಮಂತ್ರಿಯವರು ಪರೋಕ್ಷ ಬೆಂಬಲ ನೀಡಿದರು.
ಪ್ರಸ್ತುತ ಘಟನೆಯನ್ನು ತೇಪೆ ಹಾಕಲು ಹೋಗಿ ಸರಕಾರ ಮುಜುಗರಕ್ಕೆ ಒಳಗಾಗಿದೆ. ಅದಕ್ಕೆಂದೇ ಸಿ.ಟಿ.ರವಿ ಪಶ್ಚಿಮದಿಂದ ಉದಯಿಸಿ ಮದರಸ ಚಟುವಟಿಕೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡುತ್ತಿದ್ದಾರೆ. ಇಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಇದ್ದಿದ್ದರೆ, ಮದರಸದಲ್ಲಿ ಬೋಧಿಸುತ್ತಿರುವ ಒಂದೇ ಮತ, ಒಂದೇಧರ್ಮ, ಒಂದೇ ದೇವರು ಎಂಬ ದಾರ್ಶನಿಕ ಸಿದ್ದಾಂತವನ್ನು ಬೆಂಬಲಿಸಿ, ಮಸೂದ್, ಪ್ರವೀಣ್, ಫಾಝಿಲ್ ಮನೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳುತ್ತಿದ್ದರು ಎಂಬುದನ್ನು ಸಿ.ಟಿ.ರವಿ ತಿಳಿದಿರಲಿ ಎಂದು ಕೆ.ಅಶ್ರಫ್ (ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ