ಕಣ್ಣೂರು | ಕೇರಳ ಮುಸ್ಲಿಂ ಜಮಾಅತ್ ಜಿಲ್ಲಾ ಉಪಾಧ್ಯಕ್ಷ ಮತ್ತು ಸುನ್ನಿ ಮುಖಂಡರಾದ ಎನ್ ಅಬ್ದುಲ್ಲತೀಫ್ ಸಅದಿ ಪಝಸ್ಸಿ ವಫಾತಾದರು.
ಅವರು ಇಂದು ದಿವಂಗತ ಕೆ.ಎಂ.ಬಶೀರ್ ಅವರಿಗೆ ನ್ಯಾಯ ಕೋರಿ ಕಣ್ಣೂರಿನಲ್ಲಿ ಕೇರಳ ಮುಸ್ಲಿಂ ಜಮಾಅತ್ ಆಯೋಜಿಸಿದ್ದ ಕಲೆಕ್ಟರೇಟ್ ಮಾರ್ಚ್ ನಲ್ಲಿ ಪಾಲ್ಗೊಂಡು ಹಿಂತಿರುಗಿದ ನಂತರ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.ತಕ್ಷಣ ಕಣ್ಣೂರು ಎಕೆಜಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಾಣ ಉಳಿಸಲಾಗಲಿಲ್ಲ.
ಕೇರಳ ಮುಸ್ಲಿಂ ಜಮಾಅತ್ ವತಿಯಿಂದ ಇಂದು ಕಣ್ಣೂರಿನಲ್ಲಿ ಆಯೋಜಿಸಲಾದ ಕಲೆಕ್ಟರೇಟ್ ಮಾರ್ಚ್ ನಲ್ಲಿ ಎನ್.ಅಬ್ದುಲತೀಫ್ ಸಅದಿ ಪಝಸ್ಸಿ ಮುಖ್ಯ ಭಾಷಣ ಮಾಡಿದ್ದರು.
ಹೃದಯಸ್ಪರ್ಶಿಯಾದ ತಮ್ಮ ಅಭೂತಪೂರ್ವ ಭಾಷಣಾ ಶೈಲಿಯಿಂದ ಜನಮನಗೆದ್ದ ಪಝಶ್ಶಿ ಉಸ್ತಾದರು, ಸುನ್ನೀ ಸಂಘಟನಾ ರಂಗದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಇಂದು ಸಂಜೆ ಮೂರೂವರೆ ಗಂಟೆ ಸುಮಾರಿಗೆ ಅವರು ಇಹಲೋಕಕ್ಕೆ ವಿದಾಯ ಕೋರಿದರು.
















ಇನ್ನಷ್ಟು ಸುದ್ದಿಗಳು
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ