ಮಂಗಳೂರು: ಇಲ್ಲಿನ ಹೊರವಲಯದ ಸುರತ್ಕಲ್ ನಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಮಂಗಳಪೇಟೆಯ ಫಾಜಿಲ್ ಮನೆಗೆ ದ. ಕ. ಜಿಲ್ಲಾ ವಖ್ಫ್ ಮಂಡಳಿ ಚೆಯರ್ಮೆನ್ ಬಿ.ಎ. ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಇದೇ ಸಂಧರ್ಭದಲ್ಲಿ ಜಿಲ್ಲಾ ವಖ್ಫ್ ಮಂಡಳಿ ಅಧ್ಯಕ್ಷರ ಮೂಲಕ ಕರ್ನಾಟಕ ರಾಜ್ಯ ವಖ್ಫ್ ಮಂಡಳಿ ಚೆಯರ್ಮೆನ್ ಮೌಲಾನ ಎನ್. ಕೆ. ಎಂ. ಶಾಫಿ ಸ ಅದಿ ದೂರವಾಣಿ ಮೂಲಕ ಮೃತ ಫಾಝಿಲ್ ತಂದೆಯವರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು.
ಬೆಂಗಳೂರಿನಲ್ಲಿ ಸರಕಾರ ಮತ್ತು ವಖ್ಫ್ ಬೋರ್ಡ್ ನ ನಡುವಿನ ಅಗತ್ಯ ಕೆಲಸವಿರುವ ಕಾರಣ ಮೃತ ಫಾಝಿಲ್ ಮನೆಗೆ ಭೇಟಿ ನೀಡಲು ವಿಳಂಬವಾಗಿದ್ದು ಒಂದೆರಡು ದಿನಗಳಲ್ಲಿ ಭೇಟಿ ನೀಡಲಿದ್ದಾರೆ ಎಂದು ನಾಸಿರ್ ಲಕ್ಕಿಸ್ಟಾರ್ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದರು. ಅಲ್ಲದೆ ಫಾಝಿಲ್ ಕುಟುಂಬಕ್ಕೆ ಅಗತ್ಯವಾದ ಎಲ್ಲಾ ರೀತಿಯ ನೆರವು ನೀಡುವುದಾಗಿ ಇದೇ ಭರವಸೆ ನೀಡಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.
ನಿಯೋಗದಲ್ಲಿ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾರಿಸ್ ಬೈಕಂಪಾಡಿ, ಜಿಲ್ಲಾ ವಖ್ಫ್ ಸಮಿತಿಯ ಸದಸ್ಯರಾದ ಬಿ. ಕೆ. ಸಿರಾಜುದ್ದೀನ್, ಹಿದಾಯತ್, ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ