ಬೆಂಗಳೂರು: ಕೊಲೆಯಾದ ಫಾಝಿಲ್ ಹಾಗೂ ಮಸೂದ್ ಮನೆಗೆ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಕೊಲೆಯಾದ ಫಾಝಿಲ್, ಮಸೂದ್ ಮನೆಗಳಿಗೆ ಬರುವಂತಹ ದಿನಗಳಲ್ಲಿ ಭೇಟಿ ಕೊಡುತ್ತೇನೆ ಎಂದರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯಾಗುತ್ತಿದೆ. ಆದಷ್ಟು ಬೇಗನೇ ಕೊಲೆಗಡುಕರ ಪತ್ತೆ ಆಗುತ್ತೆ. ಇನ್ನೊಂದೆರಡು ಮೂರು ದಿನಗಳಲ್ಲಿ ಪ್ರಕರಣವನ್ನು ಎನ್ಐಎಗೆ ವರ್ಗಾವಣೆ ಮಾಡ್ತೇವೆ. ತಾಂತ್ರಿಕ ಮತ್ತು ಪೇಪರ್ ವರ್ಕ್ ನಡೀತಿದೆ. ಆದಷ್ಟು ಬೇಗ ಪ್ರಕರಣ ವರ್ಗಾವಣೆ ಮಾಡ್ತೇವೆ ಎಂದು ಸಿಎಂ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎನ್ಐಎಗೆ ಕೇಸ್ ಬಗ್ಗೆ ಅನೌಪಚಾರಿಕವಾಗಿ ತಿಳಿಸಿದ್ದೇವೆ. ಕೆಲವು ಎನ್ಐಎ ಅಧಿಕಾರಿಗಳು ಕೇರಳ ಮತ್ತು ಮಂಗಳೂರಿನಲ್ಲಿ ಈಗಾಗಲೇ ಮಾಹಿತಿ ಪಡೆಯುತ್ತಿದ್ದಾರೆ.
ಮಳೆಹಾನಿ ಕುರಿತು ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇನೆ. ಮಳೆ ನಷ್ಟದ ಬಗ್ಗೆ ಚರ್ಚಿಸಿ, ಪರಿಹಾರದ ಬಗ್ಗೆ ಸೂಚನೆ ಕೊಡ್ತೀನಿ. ಮಂಕಿಪಾಕ್ಸ್ ಆತಂಕ ಹಿನ್ನೆಲೆಯಲ್ಲಿ ನಾಳೆ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಸಭೆ ನಡೆಸಿ ಕಾಯಿಲೆ ಬಗ್ಗೆ ಮಾಹಿತಿ ಪಡೆದು, ಯಾವೆಲ್ಲ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸಿ, ನಿರ್ಧಾರ ಮಾಡ್ತೀನಿ ಎಂದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ