ಮಂಗಳೂರು: ಕರಾವಳಿ ಕರ್ನಾಟಕದ ವಿಷಯದಲ್ಲಿ ರಾಜ್ಯದ ಜನರು ಹೆಮ್ಮೆ ಪಡುವ ಕಾಲವೊಂದಿತ್ತು. ಆದರೆ ಇತ್ತೀಚಿಗಿನ ಹಲವು ದಶಕಗಳಿಂದ ಕರಾವಳಿ ಜಿಲ್ಲೆಯ ಜನತೆಯನ್ನು ಮತೀಯ ಧ್ರುವೀಕರಣ ಕಾರಣದಿಂದ ವಿಭಜಿಸುತ್ತಾ ಬಂದು, ಜನರು ಪ್ರಸ್ತುತ ಸಾಮಾನ್ಯ ಬದುಕು ನಿರ್ವಹಿಸುವ ಕನಿಷ್ಠ ಸಾಮರ್ಥ್ಯದಿಂದ ವಂಚಿತಾರಗಿದ್ದಾರೆ.
ಜಿಲ್ಲೆಯ ಉದ್ಯಮ, ಶಿಕ್ಷಣ, ಶಾಂತಿ ಸುವ್ಯವಸ್ಥೆ ದಿನೇ ದಿನೇ ಕುಸಿಯುವ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ವಾಣಿಜ್ಯ ಮಳಿಗೆಗಳು ಜಿಲ್ಲೆಯಿಂದ ವಲಸೆ ಪ್ರಾರಂಭಿಸಿದೆ.ಕಳೆದ ಹಲವು ದಿನಗಳಿಂದ ಜನರಿಗೆ ಬೇಡದ ನಿಷೇದಾಜ್ಞೆ ಜಾರಿಯಲ್ಲಿದೆ.
ಜನತೆಗೆ ಜಿಲ್ಲಾಡಳಿತ, ಸರ್ಕಾರ ಮತ್ತು ಸರ್ಕಾರೇತರ ಶಿಕ್ಷಣ ಸಂಸ್ಥೆಗಳು, ಸ್ವಯಂ ಸೇವಕರ ನೆರವಿನಿಂದ ಜನತೆಗೆ ನೈತಿಕ ಉತ್ತೇಜನ ನೀಡಿ ಸಾಮರಸ್ಯ ಬೆಸೆಯಲು ಖ್ಯಾತ ದಾರ್ಶನಿಕರಾದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪ್ರಸಿದ್ಧ ಮಾತುಗಳನ್ನು ಅಂಗೀಕರಿಸಿ ‘ ಒಂದೇ ಕುಲ – ಮತ – ದೇವರು ‘ ಎಂಬ ಧ್ಯೇಯ ವಾಕ್ಯ ಘೋಷಣೆಯ ಪ್ರಚಾರ ಮೂಲಕ ಜಿಲ್ಲೆಯಲ್ಲಿ ಶಾಂತಿ ಸ್ಥಾಪನೆಗೆ ಮುಂದಾಗಲಿ.
ಜನರು ಅತ್ಯಂತ ಶೀಘ್ರ ಸಹಜ ಜೀವನಕ್ಕೆ ಮರಳುವ ಶಾಂತಿ ಸುವ್ಯವಸ್ಥೆ ಸ್ಥಾಪನೆಗೆ ಜಿಲ್ಲಾಡಳಿತ ಮಾದರಿಯಾಗಲಿ, ಅದರೊಂದಿಗೆ ಜನರು ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರ ವಹಿಸಿ,ಗೊಂದಲಗಳಿಂದ ದೂರ ಉಳಿಯಲು ಪ್ರಯತ್ನಿಸಲಿ ಎಂದು ಕೆ.ಅಶ್ರಫ್.
(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ