ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಪುರುಷ ಹಿಂಬದಿ ಸವಾರರಿಗೆ ಅವಕಾಶ ಇರುವುದಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಹಿರಿಯ ನಾಗರಿಕರು, ಮಹಿಳೆಯರು ಮತ್ತು ಹದಿನೆಂಟು ವರ್ಷದ ಕೆಳಗಿನ ಮಕ್ಕಳಿಗೆ ಅವಕಾಶ ಇರುತ್ತದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಹಿಂಬದಿ ಸವಾರರಿಂದ ಅಪರಾಧ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಇತರ ರಾಜ್ಯಗಳಲ್ಲಿ ಇಂಥ ಆದೇಶ ಈಗಾಗಲೇ ಜಾರಿಯಾಗಿತ್ತು. ಅದನ್ನು ನೋಡಿದ್ದೇನೆ. ಅದೇ ರೀತಿ ಇಲ್ಲಿಯೂ ಜಾರಿಗೊಳಿಸುತ್ತಿದ್ದೇವೆ.
ಇತರ ರಾಜ್ಯಗಳಲ್ಲಿ ಯಾವುದೇ ಪುರುಷರಿಗೆ ಹಿಂಬದಿ ಸವಾರಿಗೆ ಅವಕಾಶವಿಲ್ಲ ಎಂದು ಆದೇಶ ಹೊರಡಿಸಲಾಗಿತ್ತು. ಇಲ್ಲಿ ವಯಸ್ಕ ಪುರುಷರಿಗೆ ಮಾತ್ರ ನಿರ್ಬಂಧ ವಿಧಿಸಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಎರಡು ವಾರಗಳ ಅಂತರದಲ್ಲಿ ಜಿಲ್ಲೆಯಲ್ಲಿ ಮೂರು ಯುವಕರ ಹತ್ಯೆಯಾಗಿದ್ದು, ಆ ಬಳಿಕ ಇಲ್ಲಿನ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇದನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ ನೈಟ್ ಕರ್ಪ್ಯೂ ಜಾರಿಗಳಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟು, ವಾಣಿಜ್ಯ ವ್ಯವಹಾರಗಳನ್ನು ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚುವಂತೆ ಸೂಚಿಸಲಾಗಿದೆ. ಅಲ್ಲದೆ ಕಳೆದ 10 ದಿನದಿಂದ ಮಧ್ಯ ಮಾರಾಟಕ್ಕೂ ಜಿಲ್ಲೆಯಲ್ಲಿ ನಿಷೇಧ ಹೇರಲಾಗಿದೆ.
ಹಿಂಬದಿ ಸವಾರರಿಗೆ ನಿರ್ಬಂಧವಿಲ್ಲ, ರಾತ್ರಿ 9 ಗಂಟೆ ವರೆಗೆ ವ್ಯಾಪಾರ ನಡೆಸಲು ಅವಕಾಶ- ಕಮಿಷನರ್
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ