ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಪುರುಷ ಹಿಂಬದಿ ಸವಾರರಿಗೆ ಅವಕಾಶ ಇರುವುದಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಹಿರಿಯ ನಾಗರಿಕರು, ಮಹಿಳೆಯರು ಮತ್ತು ಹದಿನೆಂಟು ವರ್ಷದ ಕೆಳಗಿನ ಮಕ್ಕಳಿಗೆ ಅವಕಾಶ ಇರುತ್ತದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಹಿಂಬದಿ ಸವಾರರಿಂದ ಅಪರಾಧ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಇತರ ರಾಜ್ಯಗಳಲ್ಲಿ ಇಂಥ ಆದೇಶ ಈಗಾಗಲೇ ಜಾರಿಯಾಗಿತ್ತು. ಅದನ್ನು ನೋಡಿದ್ದೇನೆ. ಅದೇ ರೀತಿ ಇಲ್ಲಿಯೂ ಜಾರಿಗೊಳಿಸುತ್ತಿದ್ದೇವೆ.
ಇತರ ರಾಜ್ಯಗಳಲ್ಲಿ ಯಾವುದೇ ಪುರುಷರಿಗೆ ಹಿಂಬದಿ ಸವಾರಿಗೆ ಅವಕಾಶವಿಲ್ಲ ಎಂದು ಆದೇಶ ಹೊರಡಿಸಲಾಗಿತ್ತು. ಇಲ್ಲಿ ವಯಸ್ಕ ಪುರುಷರಿಗೆ ಮಾತ್ರ ನಿರ್ಬಂಧ ವಿಧಿಸಲಾಗುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಎರಡು ವಾರಗಳ ಅಂತರದಲ್ಲಿ ಜಿಲ್ಲೆಯಲ್ಲಿ ಮೂರು ಯುವಕರ ಹತ್ಯೆಯಾಗಿದ್ದು, ಆ ಬಳಿಕ ಇಲ್ಲಿನ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇದನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ ನೈಟ್ ಕರ್ಪ್ಯೂ ಜಾರಿಗಳಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟು, ವಾಣಿಜ್ಯ ವ್ಯವಹಾರಗಳನ್ನು ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚುವಂತೆ ಸೂಚಿಸಲಾಗಿದೆ. ಅಲ್ಲದೆ ಕಳೆದ 10 ದಿನದಿಂದ ಮಧ್ಯ ಮಾರಾಟಕ್ಕೂ ಜಿಲ್ಲೆಯಲ್ಲಿ ನಿಷೇಧ ಹೇರಲಾಗಿದೆ.
ಹಿಂಬದಿ ಸವಾರರಿಗೆ ನಿರ್ಬಂಧವಿಲ್ಲ, ರಾತ್ರಿ 9 ಗಂಟೆ ವರೆಗೆ ವ್ಯಾಪಾರ ನಡೆಸಲು ಅವಕಾಶ- ಕಮಿಷನರ್
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?