janadhvani

Kannada Online News Paper

ಹಿಂಬದಿ ಸವಾರರಿಗೆ ನಿರ್ಬಂಧವಿಲ್ಲ, ರಾತ್ರಿ 9 ಗಂಟೆ ವರೆಗೆ ವ್ಯಾಪಾರ ನಡೆಸಲು ಅವಕಾಶ- ಕಮಿಷನರ್

ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ

ಮಂಗಳೂರು,ಆ.4: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.

ರಾತ್ರಿ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರ ಸಂಚರಿಸಬಾರದು ಎಂಬ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ರಾತ್ರಿ ನಿರ್ಬಂಧ ನಾಳೆಯಿಂದ ರಾತ್ರಿ 9ರಿಂದ ಆರಂಭಗೊಳ್ಳಲಿದೆ. ರಾತ್ರಿ 9 ಗಂಟೆ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಲಾಗಿದೆ. ಇದು ನಾಳೆಯಿಂದ ಮೂರು ದಿನಗಳವರೆಗೆ ಜಾರಿಯಲ್ಲಿರುತ್ತದೆ.

ಈ ಹಿಂದಿನಂತೆ 144 ಸೆಕ್ಷನ್ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com