ದೇಶವು 75 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಇದ್ದು, ಪ್ರತಿ ವರ್ಷದಂತೆ ಮುಸ್ಲಿಮರು ಸ್ವಾತಂತ್ರ್ಯೋತ್ಸವ ಆಚರಿಸಲಿದ್ದಾರೆ. ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈ ದೇಶದ ಮುಸ್ಲಿಮರು ಮಹತ್ವದ ಪಾತ್ರ ವಹಿಸಿದ್ದಾರೆ.
ಘಟಾನುಘಟಿ ಮುಸ್ಲಿಮರು ಬ್ರಿಟಿಷರ ವಿರುದ್ದ ಹೋರಾಡಿ ಪ್ರಾಣ ತ್ಯಾಗ ಮಾಡಿದ್ದಾರೆ.ಈ ದೇಶದ ಸರ್ವ ಧರ್ಮದವರ ಸಾನಿಧ್ಯದಲ್ಲಿ ಅಂದು ಹೋರಾಟ ನಡೆದು, ತಮ್ಮ ದೇಶ ಪ್ರೇಮವನ್ನು ಮೆರೆದಿದ್ದಾರೆ.
ಈ ದೇಶದ ತ್ರಿವರ್ಣ ಧ್ವಜವನ್ನು ವಿನ್ಯಾಸ ಗೊಳಿಸಿದ ಕೀರ್ತಿಯು ಸುರಯ್ಯ ತ್ಯಾಬ್ಜಿ ಎಂಬ ಮುಸ್ಲಿಮ್ ಮಹಿಳೆಗೆ ಸಲ್ಲಬೇಕು. ಈ ದೇಶದ ಧ್ವಜ ಲಾಂಛನಕ್ಕಾಗಿ ಸುರಯ್ಯಾ ತ್ಯಾಬ್ಜಿ ಅವರು ಅಶೋಕ ಚಕ್ರವನ್ನು ಆಯ್ಕೆ ಮಾಡಿದರು.ಇದು ಅವರ ಮತೇತರ ಚಿಂತನೆಯನ್ನು ಪ್ರತಿಪಾದಿಸುತ್ತದೆ. ಈ ದೇಶದ ಮುಸ್ಲಿಮ್ ಸಾಮಾನ್ಯ ಜನತೆ, ಪ್ರತಿನಿಧಿಗಳು, ಸಂಸ್ಥೆಗಳು, ಸಂಘಟನೆಗಳು ಅಂದು ಪಡೆದ ಸ್ವಾತಂತ್ರ್ಯದ ಮಹತ್ವವನ್ನು ಅರಿತು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಾ ಬಂದಿರುತ್ತಾರೆ.
ಈ ದೇಶದ ಮುಸ್ಲಿಮರ ದೇಶಪ್ರೇಮವನ್ನು ಬಹುಷಃ ಹತ್ತಿರದಿಂದ ಬಲ್ಲವರಾಗಿದ್ದಾರೆ ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರು. ಪ್ರಧಾನಿ ನರೇಂದ್ರ ಮೋದಿಯವರು ಹರ್ ಘರ್ ಮೆ ತಿರಂಗಾ ಅಭಿಯಾನ ಘೋಷಿಸಿದ್ದು , ಈ ದೇಶದ ಮೇಲಿನ ಮುಸ್ಲಿಮರ ದೇಶ ಪ್ರೇಮವನ್ನು,ಸ್ವಾತಂತ್ರ್ಯ ದಿನಾಚರಣೆಯ ಮಾನದಂಡದ ಮೂಲಕ ಅಳೆಯಲು ಅಲ್ಲ , ಬದಲಾಗಿ ಈ ದೇಶದಲ್ಲಿ ತಿರಂಗಾ ಹೊರತಾದ ಇತರ ಧ್ವಜಗಳಲ್ಲಿ ಎಷ್ಟು ಜನರಿಗೆ ಆಸಕ್ತಿ ಇದೆ ಎಂಬ ವೀಕ್ಷಣೆಗಾಗಿ ಎಂದು ಆಲೋಚಿಸ ಬೇಕಿದೆ.
ಹಾಗೇನಿದ್ದರೂ,ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಯಶಸ್ವಿಯಾಗಲಿ ಎಂದು ಕೆ.ಅಶ್ರಫ್.
(ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ) ಹಾರೈಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ