ಹಿಜರಿ ಇಸ್ಲಾಂ ಚರಿತ್ರೆಯ ಮೈಲುಗಲ್ಲು
ಕೆಸಿಎಫ್ ಕುವೈತ್ ನೋರ್ತ್ ಝೋನ್ ವತಿಯಿಂದ ಹಿಜರೀ ಸಂದೇಶ ಕಾರ್ಯಕ್ರಮವು ಆಗಸ್ಟ್ 5ರಂದು ಫರ್ವನಿಯಾ ತಾಜುಲ್ ಉಲಮಾ ಕೆಸಿಎಫ್ ಸೆಂಟರ್ ನಲ್ಲಿ ಕೆಸಿಎಫ್ ನೋರ್ತ್ ಝೋನ್ ಶಿಕ್ಷಣ ಅಧ್ಯಕ್ಷ ಬಹು ಬಶೀರ್ ಸಖಾಫಿ ಅಧ್ಯಕ್ಷತೆಯಲ್ಲಿ ನಡೆಯಿತು.
ರಾಷ್ಟ್ರೀಯ ಸಮಿತಿಯ ಸಂಘಟನಾ ವಿಭಾಗದ ಅಧ್ಯಕ್ಷ ಬಹುಮಾನ್ಯ ಉಮರ್ ಝುಹುರಿ ರವರ ಪ್ರಾಥನೆ ಯೊಂದಿಗೆ ನೋರ್ತ್ ಝೋನ್ ಸಂಘಟನಾ ಕಾರ್ಯದರ್ಶಿ ಇಲ್ಯಾಸ್ ಮೊಂಟುಗೋಳಿ ರವರು ಸ್ವಾಗತಿಸಿ ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹುಮಾನ್ಯ ಹುಸೈನ್ ಎರ್ಮಡ್ ರವರು ಉದ್ಘಾಟಿಸಿದರು.
ರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಅಧ್ಯಕ್ಷ ಬಹುಮಾನ್ಯ ಬಾದುಶಾ ಸಖಾಫಿಯವರು ಹಿಜಿರಾ ಸಂದೇಶ ಭಾಷಣ ನಡೆಸಿದರು. ರಾಷ್ಟ್ರೀಯ ಸಮಿತಿಯ ಪಬ್ಲಿಕೇಶನ್ ವಿಭಾಗದ ಅಧ್ಯಕ್ಷರಾದ ಬಹುಮಾನ್ಯ ಸಾಹುಲ್ ಹಮೀದ್ ಸಅದಿ ಝುಹುರಿ, ಕೆಸಿಎಫ್ ರಾಷ್ಟ್ರೀಯ ಸಮಿತಿಯ ಕೋಶಾಧಿಕಾರಿ ಹಾಜಿ ಮೂಸ ಇಬ್ರಾಹಿಂ, ಇಕ್ಬಾಲ್ ಎಡಪದವು, ಇಬ್ರಾಹಿಂ ಕಾಯರ್, ವಹೀಬ್ ಕೆಸಿರೋಡ್, ಇಕ್ಬಾಲ್ ಕಂದಾವರ ಹಾಗೂ ಇಸ್ಮಾಯಿಲ್ ಅಯ್ಯಂಗೇರಿ ಶುಭಾಶಯ ಕೋರಿ ಮಾತನಾಡಿದರು.

inc ಕೌನ್ಸಿಲ್ ಸದಸ್ಯರಾದ ಬಹುಮಾನ್ಯ ಅಬ್ದುಲ್ ರಹ್ಮಾನ್ ಸಖಾಫಿ ಉಸ್ತಾದರು ಉಪದೇಶ ನಿರ್ದೇಶನ ನೀಡಿ ದುವಾ ಮಾಡಿದರು.
ಕುವೈಟ್ ಕೆಸಿಎಫ್ ರಾಷ್ಟ್ರೀಯ ಸಮಿತಿಯ ನೂತನ ಅಧ್ಯಕ್ಷರಾದ ಬಹು ಹುಸೈನ್ ಎರ್ಮಾಡ್ ಉಸ್ತಾದರಿಗೆ ನೋರ್ತ್ ಝೋನ್ ವತಿಯಿಂದ ಸಾಲು ಹೊದಿಸಿ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಮಿತಿಯ ನಾಯಕರು ಝೋನ್ ನಾಯಕರು ಸೆಕ್ಟರ್ ನಾಯಕರು ಮತ್ತು ಎಲ್ಲಾ ಕೆಸಿಎಫ್ ನ ಸದಸ್ಯರು ಭಾಗವಹಿಸಿದ್ದರು. ನೋರ್ತ್ ಝೋನ್ ಶಿಕ್ಷಣ ಕಾರ್ಯದರ್ಶಿ ಜನಾಬ್ ಸಿರಾಜ್ ಸುಂಟಿಕೊಪ್ಪ ಧನ್ಯವಾದಗೈದರು.
ವರದಿ ಇಬ್ರಾಹಿಂ ವೇಣೂರು ಪಬ್ಲಿಕೇಶನ್ ವಿಭಾಗ ಕುವೈಟ್
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ