ಪಾಟ್ನಾ: ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬಿದ್ದಿದೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದ್ದಾರೆ.
ಜೆಡಿಯು ಸಂಸದರು ಮತ್ತು ಶಾಸಕರ ಸಭೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿದುಕೊಳ್ಳಲು ಪಕ್ಷವು ಸರ್ವಾನುಮತದಿಂದ ನಿರ್ಧಾರಕ್ಕೆ ಬಂದಿದ್ದು ನಂತರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇದೇ ವೇಳೆ ತಮಗೆ 160 ಶಾಸಕರ ಬೆಂಬಲವಿರುವ ಪತ್ರವನ್ನು ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ನೀಡಿದ್ದಾರೆ.
ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.
ರಾಜಿನಾಮೆ ಬಳಿಕ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಮನೆಗೆ ತೆರಳಿದ ನಿತೀಶ್ ಕುಮಾರ್ ಅವರು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ ಅವರನ್ನು ಭೇಟಿ ಮಾಡಿದರು.
ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ ನಿತೀಶ್ ಕುಮಾರ್ ಮತ್ತು ಮಹಾಘಟಬಂಧನ್ ಗೆ ಬೇಷರತ್ ಬೆಂಬಲ ಘೋಷಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ