ಪಾಟ್ನಾ: ಬಿಹಾರದಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿಗೆ ಬ್ರೇಕ್ ಬಿದ್ದಿದೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ನಿತೀಶ್ ಕುಮಾರ್ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದಿದ್ದಾರೆ.
ಜೆಡಿಯು ಸಂಸದರು ಮತ್ತು ಶಾಸಕರ ಸಭೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿಯನ್ನು ಮುರಿದುಕೊಳ್ಳಲು ಪಕ್ಷವು ಸರ್ವಾನುಮತದಿಂದ ನಿರ್ಧಾರಕ್ಕೆ ಬಂದಿದ್ದು ನಂತರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ತಮ್ಮ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇದೇ ವೇಳೆ ತಮಗೆ 160 ಶಾಸಕರ ಬೆಂಬಲವಿರುವ ಪತ್ರವನ್ನು ರಾಜ್ಯಪಾಲ ಫಾಗು ಚೌಹಾಣ್ ಅವರಿಗೆ ನೀಡಿದ್ದಾರೆ.
ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ.
ರಾಜಿನಾಮೆ ಬಳಿಕ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಮನೆಗೆ ತೆರಳಿದ ನಿತೀಶ್ ಕುಮಾರ್ ಅವರು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ ಅವರನ್ನು ಭೇಟಿ ಮಾಡಿದರು.
ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ ನಿತೀಶ್ ಕುಮಾರ್ ಮತ್ತು ಮಹಾಘಟಬಂಧನ್ ಗೆ ಬೇಷರತ್ ಬೆಂಬಲ ಘೋಷಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ