ಮಂಗಳೂರು (ಆ.11): ಇಂದು ಬೆಳ್ಳಾರೆಯ ಕಳಂಜದಲ್ಲಿರುವ ಮಸೂದ್ ನಿವಾಸಕ್ಕೆ ಹಾಗೂ ಸುರತ್ಕಲ್ ನಲ್ಲಿ ಹತ್ಯೆಯಾದ ಮಂಗಳಪೇಟೆಯ ಫಾಝಿಲ್ ಮನೆಗೆ ಭೇಟಿ ನೀಡಿದ ಮುಸ್ಲಿಂ ಸೆಂಟ್ರಲ್ ಕಮಿಟಿ ನಿಯೋಗವು ಪ್ರತೀ ಕುಟುಂಬಕ್ಕೆ 30 ಲಕ್ಷ ರೂ. ಸಹಾಯಧನದ ಚೆಕ್ ಅನ್ನು ವಿತರಿಸಿದೆ.
ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮಸೂದ್ ಅವರಿಂದ ಪರಿಹಾರ ಚೆಕ್ ವಿತರಣೆಯಾಗಿದ್ದು, ಹಲವು ಮುಸ್ಲಿಂ ಮುಖಂಡರು ಹಾಜರಿದ್ದರು.

ಪ್ರವೀಣ್ ಮನೆಯವರು ಒಪ್ಪಿದರೆ ಅವರಿಗೂ ಪರಿಹಾರ ನೀಡಲು ಸಿದ್ಧ
ಬೆಳ್ಳಾರೆ ಪ್ರವೀಣ್ ಅವರ ಮನೆಗೆ ಭೇಟಿ ನೀಡದ ಕುರಿತು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಮಹಮ್ಮದ್ ಮಸೂದ್ ಅವರು, ಪ್ರವೀಣ್ ಮನೆಗೂ ಭೇಟಿ ನೀಡಿ ಸಾಂತ್ವನ ಹೇಳುವ ಜೊತೆಗೆ 10 ಲಕ್ಷ ರೂಪಾಯಿ ಪರಿಹಾರ ನೀಡುವ ಯೋಜನೆ ಹಾಕಿಕೊಳ್ಳಲಾಗಿತ್ತು. ಆದರೆ ನಮ್ಮ ಭೇಟಿಯ ಕುರಿತು ಕುಟುಂಬಸ್ಥರಿಗೆ ಅಸಮಾಧಾನ ಇರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅವರ ಮನೆಗೆ ಭೇಟಿ ನೀಡಿಲ್ಲ. ಮನೆಯವರು ಭೇಟಿ ನೀಡಲು ಅವಕಾಶ ಮಾಡಿ ಕೊಟ್ಟರೆ ಖಂಡಿತವಾಗಿಯೂ ಭೇಟಿ ನೀಡಿ ಸಾಂತ್ವನದ ಜೊತೆಗೆ ಪರಿಹಾರವನ್ನೂ ವಿತರಿಸಲಾಗುವುದು ಎಂದು ಮಸೂದ್ ಸ್ಪಷ್ಟ ಪಡಿಸಿದರು.
ಫಾಝಿಲ್ ಅವರ ಸಹೋದರ ಏಳನೇ ತರಗತಿಯಲ್ಲಿ ಕಲಿಯುತ್ತಿದ್ದು, ಮನೆಯವರು ಅನುವು ಮಾಡಿಕೊಟ್ಟರೆ ಆತ ಐಪಿಎಸ್ ಕಲಿಯಲು ಬಯಸಿದರೂ ಆತನ ವಿದ್ಯಾಭ್ಯಾಸಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿ ನೆರವು ನೀಡಲಿದೆ ಎಂದರು.
ಸರಕಾರ ಬೆಳ್ಳಾರೆಯ ಪ್ರವೀಣ್ ಅವರ ಮನೆಗೆ ಮಾತ್ರ ಭೇಟಿ ನೀಡಿ ಪರಿಹಾರ ನೀಡಿ, ಮಸೂದ್ ಮತ್ತು ಫಾಝಿಲ್ ಕುಟುಂಬಕ್ಕೆ ಪರಿಹಾರ ನೀಡಲು ತಾರತಮ್ಯ ಎಸಗಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು,ಸರಕಾರ ಪರಿಹಾರ ನೀಡುವುದು ಯಾರ ಹಣದಿಂದ ಎಂದು ಸರಕಾರವನ್ನು ಪ್ರಶ್ನೆ ಮಾಡಿದರು. ಅದು ಪರಿಹಾರ ನೀಡುವುದು ಬಡವರು, ಬೀಡಿ ಕಟ್ಟುವವರ ಹಣ ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರಕಾರ ಫಾಝಿಲ್ ಮನೆಗೆ ಭೇಟಿ ನೀಡಿ ಪರಿಹಾರ ಧನವನ್ನು ವಿತರಿಸಬೇಕಿತ್ತು. ಆದರೆ, ಇನ್ನೂ ಸರಕಾರ ವಿತರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಗಾಗಲೇ ಮುಸ್ಲಿಂ ಸೆಂಟ್ರಲ್ ಕಮಿಟಿ ಹೇಳಿದಂತೆ ಮಸೂದ್ ಮತ್ತು ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರ ಧನವನ್ನು ವಿತರಿಸಿದೆ ಎಂದರು.
ನಿಯೋಗದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಅಲ್ ಹಾಜ್ ಕೆ. ಎಸ್. ಮುಹಮ್ಮದ್ ಮಸೂದ್, ಉಪಾಧ್ಯಕ್ಷರಾದ ಹಾಜಿ ಸಿ. ಮಹಮೂದ್, ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ರಾಜ್ ಅಲಿ, ಕೆ. ಅಶ್ರಫ್, ಪ್ರಧಾನ ಕಾರ್ಯದರ್ಶಿ ಹಾಜಿ ಹನೀಫ್ ಇದ್ದರು.
ಈ ಸಂದರ್ಭ ಮಂಗಳಪೇಟೆ ಜುಮಾ ಮಸೀದಿಯ ಅಧ್ಯಕ್ಷ ಹಸನಬ್ಬ, ಮಂಗಳಪೇಟೆ ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಶಫೀಕ್, ಬದ್ರಿಯಾ ಜುಮಾ ಮಸೀದಿಯ ಖತೀಬ್ ಉಮರ್ ಫಾರೂಕ್ ಸಖಾಫಿ ಮೊದಲಾದವರು ಉಪಸ್ಥಿತರಿದ್ದರು.
ಮಗನ ಹೆಸರಿನಲ್ಲಿ ಟ್ರಸ್ಟ್ ಮಾಡಿ ಸಮಾಜ ಸೇವೆ: ಫಾಝಿಲ್ ತಂದೆ
ಪರಿಹಾರ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೊಲೆಯಾದ ಫಾಝಿಲ್ ಅವರ ತಂದೆ ಉಮರ್ ಫಾರೂಕ್ ಅವರು, ನನ್ನ ಮಗ ಫಾಝಿಲ್ ರಕ್ತದಾನದಂತಹ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪರಿಹಾರದಿಂದ ಫಾಝಿಲ್ ನ ಹೆಸರಿನಲ್ಲಿ ಟ್ರಸ್ಟ್ ವೊಂದನ್ನು ತೆರೆಯಲಾಗುವುದು. ಆ ಮೂಲಕ ಫಾಝಿಲ್ ನ ಹೆಸರಿನಲ್ಲಿ ಸಮಾಜ ಸೇವೆ ಮಾಡಲಾಗುವುದು ಎಂದು ನುಡಿದರು.
ಈ ಸಂದರ್ಭ ಪುತ್ತು ಬಾವ, ಸಿಎಂ ಹನೀಫ್, ಅಬ್ದುಲ್ ಮಜೀದ್ ಸಿತಾರ್, ಅಬ್ದುಲ್ ಖಾದರ್ ವಿಟ್ಲ, ರಿಯಾಝುದ್ದೀನ್, ಬಿ. ಎಸ್ ಇಮ್ಮಿಯಾಝ್, ಅಬ್ದುಲ್ ಲತೀಫ್, ಸುರತ್ಕಲ್ ಐಕ್ಯತಾ ವೇದಿಕೆಯ ಅಶ್ರಫ್, ಶರೀಫ್, ಅಬ್ದುಲ್ ಜಲೀಲ್, ಫಾರೂಕ್, ಹನೀಫ್ ಪಾಜೆಪಲ್ಲ, ಹನೀಫ್, ಸ್ಥಳೀಯ ಮಸೀದಿ ಅಧ್ಯಕ್ಷ ಹಸನಬ್ಬ, ಶಮೀರ್ ಕಾಟಿಪಳ್ಳ, ಸರ್ಫರಾಝ್ ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)