ಹೊಸದಿಲ್ಲಿ: ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಆರಂಭಿಸಿರುವ “ಹರ್ ಘರ್ ತಿರಂಗ” ಅಭಿಯಾನವನ್ನು ಬಹಿಷ್ಕರಿಸುವಂತೆ ಹಿಂದುತ್ವವಾದಿ ಯತಿ ನರಸಿಂಹಾನಂದ್ ಹಿಂದೂಗಳಿಗೆ ಕರೆ ನೀಡಿದ್ದಾರೆ.
ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಉತ್ತೇಜಿಸಲು “ಹರ್ ಘರ್ ತಿರಂಗ” ಅಭಿಯಾನವನ್ನು ಪ್ರಾರಂಭಿಸಿದ್ದರು.
ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಈ ಹಿಂದೆ ಹಲವು ದ್ವೇಷದ ಭಾಷಣದ ಆರೋಪಿ ನರಸಿಂಗಾನಂದ, “ಈ ಅಭಿಯಾನವು ಮುಸ್ಲಿಂ ಒಡೆತನದ ಕಂಪನಿಗೆ ಲಾಭದಾಯಕವಾಗಿದೆ’ ಎಂದು ಹೇಳಿದ್ದಾರೆ.
”ಈ ಅಭಿಯಾನಕ್ಕಾಗಿ (ಧ್ವಜಗಳನ್ನು ತಯಾರಿಸುವ) ಆರ್ಡರ್ ಅನ್ನು ಪಶ್ಚಿಮ ಬಂಗಾಳದ ಸಲಾವುದ್ದೀನ್ ಒಡೆತನದ ಕಂಪನಿಗೆ ನೀಡಲಾಗಿದೆ’ ಎಂದು ಅವರು ಹೇಳಿದ್ದಾರೆ. “ಇದು ಹಿಂದೂಗಳ ವಿರುದ್ಧದ ಒಂದು ದೊಡ್ಡ ಪಿತೂರಿ. ನೀವು (ಹಿಂದೂಗಳು) ಜೀವಂತವಾಗಿರಲು ಬಯಸಿದರೆ, ಈ ಅಭಿಯಾನದ ಹೆಸರಿನಲ್ಲಿ ನಿಮ್ಮ ಹಣವನ್ನು ಮುಸ್ಲಿಮರಿಗೆ ನೀಡುವುದನ್ನು ನಿಲ್ಲಿಸಿ’ ಎಂದು ನರಸಿಂಹಾನಂದ ಹೇಳಿಕೆ ನೀಡಿದ್ದಾರೆ.
ಹಿಂದೂ ರಾಜಕಾರಣಿಗಳು ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕಾಗಿ ಪ್ರಚಾರ ಮಾಡುತ್ತಾರೆ, ಆದರೆ ಅಧಿಕಾರಕ್ಕೆ ಬಂದ ನಂತರ ಅವರಿಗೆ ಸರ್ಕಾರಿ ಗುತ್ತಿಗೆಗಳನ್ನು ನೀಡುತ್ತಾರೆ ಎಂದು ನರಸಿಂಹಾನಂದ ವೀಡಿಯೊದಲ್ಲಿ ಆರೋಪಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ