ಹೊಸದಿಲ್ಲಿ: ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಆರಂಭಿಸಿರುವ “ಹರ್ ಘರ್ ತಿರಂಗ” ಅಭಿಯಾನವನ್ನು ಬಹಿಷ್ಕರಿಸುವಂತೆ ಹಿಂದುತ್ವವಾದಿ ಯತಿ ನರಸಿಂಹಾನಂದ್ ಹಿಂದೂಗಳಿಗೆ ಕರೆ ನೀಡಿದ್ದಾರೆ.
ಕಳೆದ ತಿಂಗಳು, ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಉತ್ತೇಜಿಸಲು “ಹರ್ ಘರ್ ತಿರಂಗ” ಅಭಿಯಾನವನ್ನು ಪ್ರಾರಂಭಿಸಿದ್ದರು.
ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಈ ಹಿಂದೆ ಹಲವು ದ್ವೇಷದ ಭಾಷಣದ ಆರೋಪಿ ನರಸಿಂಗಾನಂದ, “ಈ ಅಭಿಯಾನವು ಮುಸ್ಲಿಂ ಒಡೆತನದ ಕಂಪನಿಗೆ ಲಾಭದಾಯಕವಾಗಿದೆ’ ಎಂದು ಹೇಳಿದ್ದಾರೆ.
”ಈ ಅಭಿಯಾನಕ್ಕಾಗಿ (ಧ್ವಜಗಳನ್ನು ತಯಾರಿಸುವ) ಆರ್ಡರ್ ಅನ್ನು ಪಶ್ಚಿಮ ಬಂಗಾಳದ ಸಲಾವುದ್ದೀನ್ ಒಡೆತನದ ಕಂಪನಿಗೆ ನೀಡಲಾಗಿದೆ’ ಎಂದು ಅವರು ಹೇಳಿದ್ದಾರೆ. “ಇದು ಹಿಂದೂಗಳ ವಿರುದ್ಧದ ಒಂದು ದೊಡ್ಡ ಪಿತೂರಿ. ನೀವು (ಹಿಂದೂಗಳು) ಜೀವಂತವಾಗಿರಲು ಬಯಸಿದರೆ, ಈ ಅಭಿಯಾನದ ಹೆಸರಿನಲ್ಲಿ ನಿಮ್ಮ ಹಣವನ್ನು ಮುಸ್ಲಿಮರಿಗೆ ನೀಡುವುದನ್ನು ನಿಲ್ಲಿಸಿ’ ಎಂದು ನರಸಿಂಹಾನಂದ ಹೇಳಿಕೆ ನೀಡಿದ್ದಾರೆ.
ಹಿಂದೂ ರಾಜಕಾರಣಿಗಳು ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕಾಗಿ ಪ್ರಚಾರ ಮಾಡುತ್ತಾರೆ, ಆದರೆ ಅಧಿಕಾರಕ್ಕೆ ಬಂದ ನಂತರ ಅವರಿಗೆ ಸರ್ಕಾರಿ ಗುತ್ತಿಗೆಗಳನ್ನು ನೀಡುತ್ತಾರೆ ಎಂದು ನರಸಿಂಹಾನಂದ ವೀಡಿಯೊದಲ್ಲಿ ಆರೋಪಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ