ಕನ್ನೌಜ್: ಕಳೆದ ತಿಂಗಳು ಕೋಮುಗಲಭೆಗೆ ಕಾರಣವಾಗಿದ್ದ ತಾಲ್ಗ್ರಾಮ್ ಪಟ್ಟಣದ ದೇವಸ್ಥಾನದಲ್ಲಿ ಮಾಂಸವನ್ನು ಎಸೆದಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಚಂಚಲ್ ತ್ರಿಪಾಠಿ ಪ್ರಮುಖ ಆರೋಪಿಯಾಗಿದ್ದು ಈತ ಕಟುಕನಾಗಿದ್ದ ಮನ್ಸೂರ್ ಕಸಾಯಿಗೆ 10 ಸಾವಿರ ರೂಪಾಯಿಗಳ ಆಮಿಷ ಒಡ್ಡಿ ಈ ಕೆಲಸ ಮಾಡಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್ ಹೇಳಿದ್ದಾರೆ.
ಚಂಚಲ್ ತ್ರಿಪಾಠಿಗೆ ಆಗಿನ ಎಸ್ಎಚ್ಒ ಹರಿ ಶ್ಯಾಮ್ ಸಿಂಗ್ ಅವರೊಂದಿಗೆ ಉತ್ತಮ ಸಂಬಂಧ ಇರಲಿಲ್ಲ. ಹೀಗಾಗಿ ಅವರನ್ನು ಹುದ್ದೆಯಿಂದ ತೆಗೆದುಹಾಕಲು ಈ ರೀತಿಯ ಕುಕೃತ್ಯಕ್ಕೆ ಕೈಹಾಕಿದ್ದರು ಎಂದು ತಿಳಿಸಿದ್ದಾರೆ.
ಕಳೆದ ಜುಲೈ 16ರಂದು ದೇವಸ್ಥಾನದಲ್ಲಿ ಮಾಂಸದ ತುಂಡು ಪತ್ತೆಯಾದ ಹಿನ್ನಲೆಯಲ್ಲಿ ಕೋಮುಗಲಭೆ ಸೃಷ್ಟಿಯಾಗಿತ್ತು. ಅಲ್ಲದೆ ಒಂದು ಸಮುದಾಯಕ್ಕೆ ಸೇರಿದ ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಇದುವರೆಗೆ 17 ಮಂದಿಯನ್ನು ಬಂಧಿಸಿದ್ದಾರೆ.
ಮನ್ಸೂರ್ ಕಸಾಯಿಯನ್ನು ಬಂಧಿಸಿದ ನಂತರ, ಘಟನೆಯ ದುರುದ್ದೇಶ ಹೊರಬಂದಿದೆ. ರಾನ್ವಾ ಗ್ರಾಮದ ನಿವಾಸಿ ಚಂಚಲ್ ತ್ರಿಪಾಠಿ ಮಾಂಸದ ತುಂಡುಗಳನ್ನು ದೇವಸ್ಥಾನದಲ್ಲಿ ಇಡುವಂತೆ ಹೇಳಿದ್ದರೂ ಎಂದು ಮನ್ಸೂರ್ ಪೊಲೀಸರಿಗೆ ತಿಳಿಸಿದ್ದಾರೆ.
ಇನ್ನು ಈ ಘಟನೆ ನಂತರ ಅಂದಿನ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಿಶ್ರಾ, ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಶ್ರೀವಾಸ್ತವ ಮತ್ತು ತಾಲ್ಗ್ರಾಮ್ ಪೊಲೀಸ್ ಠಾಣೆ ಪ್ರಭಾರಿ ಹರಿ ಶ್ಯಾಮ್ ಸಿಂಗ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ