ಕೈರಂಗಳ: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ ಇಲ್ಲಿನ ಅಲ್-ಅಮೀನ್ ಫ್ರೆಂಡ್ಸ್ ಕೈರಂಗಳ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.

ಸಂಸ್ಥೆಯ ನಿರ್ದೇಶಕರಾದ ಹೈದರ್ ಕೈರಂಗಳ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ಭಾರತದ ಅಮೃತಗಳಿಗೆಯಲ್ಲಿ ಸಂಭ್ರಮಿಸಿದ ತ್ರಿವರ್ಣ ಧ್ವಜಗಳು ಮೌಲ್ಯ ಕಳೆದುಕೊಳ್ಳದಂತೆ ಸುರಕ್ಷಿತವಾಗಿಡಬೇಕೆಂದು ಸಲಹೆ ನೀಡಿ, ಸ್ವಾತಂತ್ರ್ಯದ ಶುಭಾಶಯಗಳನ್ನು ಕೋರಿದರು.ಸಮಾರಂಭದ ಅಧ್ಯಕ್ಷತೆಯನ್ನು ಅಲ್-ಅಮೀನ್ ಫ್ರೆಂಡ್ಸ್ ಕೈರಂಗಳ ಸಂಸ್ಥೆಯ ಅಧ್ಯಕ್ಷರಾದ ಶರೀಫ್ ಸುಟ್ಟ ವಹಿಸಿದರು.
ಸ್ಥಳೀಯ ತೋಟಾಲ್ ಜುಮಾ ಮಸೀದಿ ಖತೀಬರಾದ ಅಲ್ಹಾಜ್ ಮುಹಿಯ್ಯದ್ದೀನ್ ಸಅದಿ ತೋಟಾಲ್ ದುವಾ ನೆರವೇರಿಸಿ ಸ್ವಾತಂತ್ರ್ಯ ಸಂದೇಶ ಭಾಷಣಗೈದರು. ಇದೇ ಸಂದರ್ಭದಲ್ಲಿ ಅಂಬರ್ ವ್ಯಾಲಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಅಬ್ದುಲ್ ಅಝೀಝ್ ಮೊಂಟೆಪದವು ಮತ್ತು ಕೈರಂಗಳ ಶಾಲಾ ಶಿಕ್ಷಕರಾದ ದೇವದಾಸ್ ಮಾಸ್ಟರ್ ಇವರನ್ನು ಸನ್ಮಾನಿಸಲಾಯಿತು.

ತೋಟಾಲ್ ಜುಮಾ ಮಸೀದಿ ಅಧ್ಯಕ್ಷರಾದ ಮೂಸಕುಂಙಿ ಹಾಜಿ ಪಾರೆ, ಗೌಸಿಯಾಯಂಗ್ಮೆನ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಹೈದರ್ ಮಲಿ, ಸಂಸ್ಥೆಯ ನಿರ್ದೇಶಕರಾದ ಟಿ.ಕೆ ಸಫ್ವಾನ್ ಶರೀಫ್, ಇಕ್ಬಾಲ್ ಕೈರಂಗಳ, SYS D.G ಕಟ್ಟೆ ಅಧ್ಯಕ್ಷ ಅಬ್ದುಲ್ ರಹಿಮಾನ್, ತೋಟಾಲ್ ಜುಮಾ ಮಸೀದಿ ಪ್ರ.ಕಾರ್ಯದರ್ಶಿ ಶರೀಫ್ ಟಿ.ಎಚ್, ಕಾರ್ಯದರ್ಶಿ ಅಹ್ಮದ್ ಕುಂಙಿ, SSF ಡಿ.ಜಿ ಕಟ್ಟೆ ಅಧ್ಯಕ್ಷ ಇಕ್ಬಾಲ್ ಸುಟ್ಟ ಮತ್ತಿತರರು ಉಪಸ್ಥಿತರಿದ್ದರು.
ಸದಸ್ಯರಾದ ಮಹಮ್ಮದ್ ಸಿನಾನ್ ಸುಟ್ಟ ಸ್ವಾಗತಿಸಿ, ಪ್ರ.ಕಾರ್ಯದರ್ಶಿ ಹಂಝ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್