ರಾಸಲ್ ಖೈಮಾ :ಭಾರತ ದೇಶಾದ್ಯಂತ ನಡೆದ ಆಗಸ್ಟ್ 15 ರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭ ಸಂಭ್ರಮದ ಸಂಧರ್ಭದಲ್ಲಿ ಅನಿವಾಸಿ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಪೌಂಡೇಶನ್ (ಕೆ.ಸಿ.ಎಫ್) ರಾಸಲ್ ಖೈಮಾ ಝೋನ್ ಅದ್ದೂರಿಯಾಗಿ ಸ್ವಾತಂತ್ರ್ಯ ದಿನವನ್ನು ಆಚರಿಸಿದೆ.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಐಕ್ಯತೆ ಹೆಚ್ಚು ಮಹತ್ವವನ್ನು ಹೊಂದಿದೆ ಇಲ್ಲಿ ಜಾತಿ, ಭೇದ, ವರ್ಣ ನೀತಿಗೆ ಅವಕಾಶ ಇರುವುದಿಲ್ಲ. ಆದರೂ ರಾಜಕೀಯ ಪ್ರೇರಿತ ಶಕ್ತಿಗಳಿಂದ ದೇಶದ ಐಕ್ಯತೆಗೆ ಧಕ್ಕೆಯಾಗುತ್ತಿದೆ. ಇದನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಏಕ ಕಂಠದಿಂದ ಎದುರಿಸಿ ಪ್ರಭುತ್ವದ ಮಹತ್ವವನ್ನು ಸಾರಬೇಕು ಎಂಬ ಸಂದೇಶ ದೊಂದಿಗೆ ಸ್ವಾಗತ ಭಾಷಣ ನಿರ್ವಹಿಸಿದ ಅಫ್ಝಲ್ ಮಂಗಳೂರು ಆಗ್ರಹಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿರ್ವಹಿಸಿದ ಹನೀಫ್ ಮುಸ್ಲಿಯಾರ್ ಮಾತನಾಡಿ, ಭಾರತೀಯತೆ ಪ್ರತಿಯೊಬ್ಬ ಮುಸ್ಲಿಮನ ವಿಶ್ವಾಸದ ಭಾಗವಾಗಿದೆ, ಅನ್ಯೋನ್ಯತೆಯ ಬದುಕು ಬದುಕಿ ಭಾರತವನ್ನು ಸುಂದರಗೊಳಿಸುವುದು ಯುವಕರ ಕರ್ತವ್ಯವಾಗಿದೆ, ರಾಜಕೀಯವನ್ನು ರಾಷ್ಟ್ರದ ಅಭಿವೃದ್ದಿಗಾಗಿ ಮಾತ್ರ ಬಳಸಬೇಕು ಎಂದು ಹೇಳಿದ ಅವರು ಧರ್ಮದ ಹೆಸರಿನಲ್ಲಿ ಕಚ್ಚಾಟ ನಡೆಸಿ ರಾಜಕೀಯ ಹೆಣಗಳಾಗಿ ಉರುಳಬೇಕಾದವರಲ್ಲ ಯುವಕರು ಎಂದು ಸಲಹೆ ನೀಡಿದರು.

ಮುಹಮ್ಮದ್ ಅಲಿ ಹೆಜಮಾಡಿ, ಇಸ್ಮಾಯಿಲ್ ಮುಸ್ಲಿಯಾರ್ ಕೊಡಗು, ಸಲಾಂ ಕಕ್ಕಿಂಜೆ, ಝೈನುದ್ಧೀನ್ ಮಡಿಕೇರಿ, ಹಾರಿಸ್ ಈಶ್ವರಮಂಗಳ, ನಿಯಾಝ್ ಬಾಕಿಮಾರು ಸೇರಿದಂತೆ ಇತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಾಸಲ್ ಖೈಮಾದ ಪ್ರತಿಷ್ಠಿತ ಜ್ಯೂಸ್ ವರ್ಲ್ಡ್ ನಲ್ಲಿ ನಡೆದ ಕಾರ್ಯಕ್ರಮವು ರಾಷ್ಟ್ರ ಗೀತೆ ಯೊಂದಿಗೆ ಸಮಾರೋಪ ಗೊಂಡಿತು.
















ಇನ್ನಷ್ಟು ಸುದ್ದಿಗಳು
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ