janadhvani

Kannada Online News Paper

KSWA ಕುವೈತ್ ರಾಷ್ಟ್ರೀಯ ಸಮಿತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ (KSWA) ಕುವೈತ್ ರಾಷ್ಟ್ರೀಯ ಸಮಿತಿಯ ವತಿಯಿಂದ ಭಾರತ ದೇಶದ 75 ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಕಾರ್ಯಕ್ರಮವು KSWA ಕುವೈತ್ ರಾಷ್ಟ್ರೀಯ ಅಧ್ಯಕ್ಷ ಮಾಹಿನ್ ಸಖಾಫಿ ಅಯ್ಯಂಗೆರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

KSWA ಕುವೈಟ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಮಾಹಿನ್ ಸಖಾಫಿ ಉಸ್ತಾದ್ ರವರು ದುಃಅ ನೆರೆವೇರಿಸಿದರು. ಪ್ರ.ಕಾರ್ಯದರ್ಶಿ ಜನಾಬ್ ಇಸ್ಮಾಯಿಲ್ ಅಯ್ಯಂಗೇರಿ ಸ್ವಾಗತ ಕೋರಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕುರಿತು ಮಾತನಾಡಿದರು. ಶಿಕ್ಷಣ ವಿಬಾಗ ಅಧ್ಯಕ್ಷರಾದ ಬಹು ಬಶೀರ್ ಸಖಾಫಿ ಉಸ್ತಾದ್ ರವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ ಮಾಡಿದವರನ್ನು ನೆನಪಿಸಿ ಮಾತನಾಡಿದರು.

ವೇದಿಕೆಯಲ್ಲಿ ಸಾಂತ್ವನ ವಿಭಾಗದ ಅಧ್ಯಕ್ಷರಾದ ರಹೀಮ್ ಕೊಳಕೇರಿ .ಅಬ್ದುಲ್ ರಹಮಾನ್ ಪಾರಪಳ್ಳಿ ಮುಂತಾದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ: ಬಾದುಷಾ ಸಖಾಫಿ ಮಾದಾಪುರ

error: Content is protected !! Not allowed copy content from janadhvani.com