ಕುವೈತ್: ಸಿರಿಯಾದಲ್ಲಿ ಮುಗ್ಧ ನಾಗರಿಕರ ವಿರುದ್ಧ ಆಕ್ರಮಣವು ಅಧಿಕಗೊಂಡಿದ್ದು, ಕದನ ವಿರಾಮದ ಬೇಡಿಕೆಯೊಂದಿಗೆ ಕುವೈತ್ ಮತ್ತೊಮ್ಮೆ ರಂಗ ಪ್ರವೇಶನ ಗೈದಿದೆ. ಸಿರಿಯನ್ ವಿಷಯದಲ್ಲಿ ಯುಎನ್ ಸೆಕ್ಯುರಿಟಿ ಕೌನ್ಸಿಲ್ ನಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಕುವೈಟ್ ನ ಪ್ರತಿನಿಧಿ ಬದರ್ ಅಬ್ದುಲ್ಲ ಅಲ್-ಮುನೀಖ್ ಈ ಬೇಡಿಕೆ ಇಟ್ಟಿದ್ದಾರೆ.
ಎಲ್ಲಾ ಅಂತರರಾಷ್ಟ್ರೀಯ ಮಾನದಂಡ ಗಳನ್ನು ಗಾಳಿಗೆತೂರಿ ನಾಗರಿಕರ ವಿರುದ್ಧ ಬಶರ್ ಸೇನೆಯು, ರಾಸಾಯನಿಕ ದಾಳಿ ನಡೆಸುತ್ತಿದ್ದು, ಪ್ರತೀ ದಾಳಿಯಲ್ಲೂ ನೂರಾರು ಜನರು ಮೃತಪಟ್ಟು, ಸಾವಿರಾರು ಜನರು ಗಾಯಗೊಂಡಿದ್ದಾರೆ.
ಸ್ವಯಂಸೇವಕ ಗುಂಪುಗಳಿಗೆ ಕೊಲ್ಲಲ್ಪಟ್ಟವರನ್ನು ಸಮಾಧಿ ಮಾಡಲು ಅಥವಾ ಗಾಯಗೊಂಡವರಿಗೆ ಚಿಕಿತ್ಸೆಯನ್ನು ನೀಡಲು ಕೂಡಾ ಸಾಧ್ಯವಾಗುತ್ತಿಲ್ಲ.ಈ ಅವಸ್ಥೆಯಲ್ಲಿ ಸಂತ್ರಸ್ತರಿಗೆ ಮಾನವೀಯ ನೆರವು ನೀಡಲು ಸಿರಿಯಾದಲ್ಲಿ ಕಡಿಮೆ ಪಕ್ಷ ಒಂದು ತಿಂಗಳ ಮಟ್ಟಿಗಾದರೂ ಕದನ ವಿರಾಮ ಘೋಷಿಸುವಂತೆ ಕುವೈತ್ ಕರೆ ನೀಡಿದೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ