ಕರ್ನಾಟಕ ಕಲ್ಚರಲ್ ಫೌಂಡೇಷನ್ ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಭಾರತದ 76 ನೇ ಸ್ವಾತಂತ್ರ್ಯದ ಪ್ರಯುಕ್ತ ಆಝಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮವು ಆಗಸ್ಟ್ 19 ರಂದು ರಾತ್ರಿ 8 ಗಂಟೆಗೆ ಅಲ್ ಹಿಲಾಲ್ ಆಡಿಟೋರಿಯಂ ಸಲ್ಮಾಬಾದ್ ಬಹರೈನ್ ನಲ್ಲಿ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ನೇತಾರಾದ ಬಹು| ಅಲಿ ಮುಸ್ಲಿಯಾರ್ ಕೊಡಗು ಇವರ ದುಆದೊಂದಿಗೆ ಆರಂಭಗೊಂಡಿತು.

ಕೆಸಿಎಫ್ ಬಹರೈನ್ ರಾಷ್ಟ್ರೀಯ ಅಧ್ಯಕ್ಷರಾದ ಜನಾಬ್| ಜಮಾಲುದ್ದೀನ್ ವಿಟ್ಲರವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್ ವೈ ಎಸ್ ದಕ್ಷಿಣ ಕನ್ನಡ ಜಿಲ್ಲೆಯ ಪಶ್ಚಿಮ ವಲಯದ ಅಧ್ಯಕ್ಷರಾದ ಸಿ ಎಚ್ ಮುಹಮ್ಮದ್ ಅಲಿ ಸಖಾಫಿ ಮುಖ್ಯ ಪ್ರಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕನ್ನಡ ಸಂಘ ಬಹರೈನ್ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಸೇಕ್ರೆಡ್ ಹಾರ್ಟ್ ಕ್ಯಾಥೋಲಿಕ್ ಚರ್ಚ್ ಮನಾಮ ಇದರ ಪ್ರಭಾರಿ ಸಹಾಯಕ ಅರ್ಚಕರಾದ ಫಾ|ಡೇರಲ್ ಫೆರ್ನಾಂಡಿಸ್ ಕಪುಚಿನ್, ಅಂತರ್ ರಾಷ್ಟ್ರೀಯ ಟೋಸ್ಟ್ ಮಾಸ್ಟರ್ ಬಹರೈನ್ ಐ ವಿಭಾಗದ ನಿರ್ದೇಶಕರಾದ DTM ರೋಷನ್ ಲೆವಿಸ್ ಹಾಗೂ ಕೆಸಿಎಫ್ ಬಹರೈನ್ ಉರ್ದು ವಿಂಗ್ ನೇತಾರರಾದ ಗಯಾಝುದ್ದೀನ್ ಮೈಸೂರು, ರಾಷ್ಟ್ರೀಯ ಸಮಿತಿ ಸಂಘಟನಾ ಇಲಾಖೆಯ ಅಧ್ಯಕ್ಷರಾದ ಕಲಂದರ್ ಮುಸ್ಲಿಯಾರ್ ಕಕ್ಕೆಪದವು ಕಾರ್ಯಕ್ರಮದಲ್ಲಿ ಆಶಂಸಾ ಭಾಷಣ ಮಾಡಿದರು.
ಪ್ರಾಸ್ತಾವಿಕ ಭಾಷಣ ಮಾಡಿದ
ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯರವರು ಸ್ವತಂತ್ರ ಭಾರತದಲ್ಲಿ ನಡೆಯುತ್ತಿರುವ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಬೆಳಕು ಚೆಲ್ಲಿದರು.

ಕಾರ್ಯಕ್ರಮದಲ್ಲಿ ಕೆಸಿಎಫ್ ಬಹರೈನ್ ರಾಷ್ಟ್ರೀಯ ನಾಯಕರು, ಝೋನ್, ಸೆಕ್ಟರ್ ಗಳ ನಾಯಕರು ಮತ್ತು ಸದಸ್ಯರು ಭಾಗವಹಿಸಿದರು.
ಕೆಸಿಎಫ್ ಬಹರೈನ್ ಪಬ್ಲಿಕೇಶನ್ ಕಾರ್ಯದರ್ಶಿ ತೌಫೀಕ್ ಬೆಳ್ತಂಗಡಿ ಸ್ವಾಗತಿಸಿ, ಪಬ್ಲಿಕೇಶನ್ ಅಧ್ಯಕ್ಷರಾದ ಲತೀಫ್ ಪೇರೋಲಿ ಕಾರ್ಯಕ್ರಮ ನಿರೂಪಿಸಿದರು.
ಸಾಂತ್ವನ ಇಲಾಖೆ ಅಧ್ಯಕ್ಷರಾದ ಇರ್ಫಾನ್ ಮೇಲ್ಕಾರ್ ವಂದಿಸಿ. ಇಹ್ಸಾನ್ ಇಲಾಖೆಯ ಅಧ್ಯಕ್ಷರಾದ ಸಮದ್ ಉಜಿರೆಬೆಟ್ಟು ರವರ ರಾಷ್ಟ್ರಗೀತೆ ಆಲಾಪನೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!