ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್, ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅವಕಾಶವಿಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪಿಸಲು ಆವಕಾಶವಿಲ್ಲ. ಬಕ್ರೀದ್ ಮತ್ತು ರಂಜಾನ್ ಹಬ್ಬದ ಪ್ರಾರ್ಥನೆಗೆ ಯಥಾಪ್ರಕಾರ ಅವಕಾಶ ನೀಡಲಾಗಿದೆ. ಹಾಗೂ ಚಾಮರಾಜಪೇಟೆ ಈದ್ಗಾ ಜಾಗವನ್ನು ಆಟದ ಮೈದಾನವಾಗಿಯೂ ಬಳಕೆ ಮಾಡಲು, ಮೊದಲು ಇದ್ದಂತೆ ಯಥಾಸ್ಥಿತಿ ಕಾಯಲು ನ್ಯಾ.ಹೇಮಂತ್ ಚಂದನ್ ಗೌಡರ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಹಾಗೂ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಲಾಗಿದೆ.
ಮೈದಾನದ ಮಾಲೀಕತ್ವ ಪ್ರಶ್ನೆ ಉದ್ಭವಿಸುವುದಿಲ್ಲ. ಹಿಂದೆಯೇ ಗೆಜೆಟ್ ನೋಟೀಫಿಕೇಶನ್ ಆಗಿದೆ. ಸುಪ್ರೀಂ ಕೋರ್ಟ್ ಆದೇಶ ಕೂಡಾ ಇದೆ. ಮಕ್ಕಳು ಆಟ ಆಡಲು ಅನುಮತಿ ಇದೆ. ವರ್ಷಕ್ಕೆ ಎರಡು ಬಾರಿ ನಮಾಜ್ ಗೆ ಅನುಮತಿ ಇದೆ ಎಂದು ವಕ್ಫ್ ಬೋರ್ಡ್ ಪರ ವಕೀಲ ಮಾಹಿತಿ ನೀಡಿದರು.
ಮತ್ತೊಂದೆಡೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ಮಾತನಾಡಿದ್ದು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ ಹೈಕೋರ್ಟ್ ಆದೇಶದಂತೆ ಯಥಾಸ್ಥಿತಿ ಕಾಪಾಡುತ್ತೇವೆ. ಗಣೇಶೋತ್ಸವ ಸಂಬಂಧ 7 ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಗಣೇಶೋತ್ಸವ ಮಾಡಬೇಡಿ ಎಂದು 2 ಸಂಘಟನೆ ಅರ್ಜಿ ಸಲ್ಲಿಸಿವೆ. ಹೈಕೋರ್ಟ್ ಆದೇಶ ಸಂಬಂಧ ಸರ್ಕಾರದ ಜತೆ ಚರ್ಚಿಸುತ್ತೇವೆ. ಈದ್ಗಾ ಮೈದಾನ ಸಂಬಂಧ ಹೈಕೋರ್ಟ್ ಆದೇಶ ಪಾಲಿಸುತ್ತೇವೆ ಎಂದರು.
ನ್ಯಾಯಾಲಯದ ಆದೇಶ ನಮಗೆ ಸಂತೋಷತಂದಿದೆ- ಶಾಫಿ ಸಅದಿ
ಚಾಮರಾಜಪೇಟೆ ಮೈದಾನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಬೆನ್ನಲೆ ಬೆಂಗಳೂರಿನಲ್ಲಿ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲಾನಾ ಮುಹಮ್ಮದ್ ಶಾಫಿ ಸಆದಿ ಸುದ್ದಿಗೋಷ್ಠಿ ನಡೆಸಿದ್ದಾರೆ. ನ್ಯಾಯಾಲಯದ ಆದೇಶ ನಮಗೆ ಸಂತೋಷತಂದಿದೆ. ಚಾಮರಾಜಪೇಟೆಯಲ್ಲಿ ಇರುವುದು ನಮ್ಮ ಈದ್ಗಾ ಮೈದಾನ. ಬಿಬಿಎಂಪಿ ಹಾಗೂ ನಮಗೂ ವ್ಯಾಜ್ಯ ಇತ್ತು. ಈಗಾಗಲೇ ಸುಪ್ರೀಂಕೋರ್ಟ್ ಆದೇಶ ಸಹ ಮಾಡಿತ್ತು. BBMP ಜಂಟಿ ಆಯುಕ್ತ ಸ್ವಲ್ಪ ಎಡವಟ್ಟು ಮಾಡಿಕೊಂಡಿದ್ದಾರೆ. ಮೈದಾನ ಸಂಬಂಧ ಈಗ ನ್ಯಾಯಾಲಯ ಆದೇಶ ಮಾಡಿದೆ ಎಂದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ