ಮಂಗಳೂರು: ಬಿ.ಜೆ.ಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ತನ್ನ ನಿಕೇತನ ಪ್ರೇರಿತ ಹೇಳಿಕೆಯಲ್ಲಿ ಮದರಸ ಭಯೋತ್ಪಾದನೆಯ ಮೂಲ ಎಂದು ಹೇಳಿಕೆ ನೀಡಿದ್ದಾರೆ. ಹರಿಕೃಷ್ಣ ಬಂಟ್ವಾಳ್ ರವರು ತನ್ನ ಈ ಹಿಂದಿನ ರಾಜಕೀಯ ಜೀವನದಲ್ಲಿ ಅವರ ರಾಜಕೀಯ ಚಟುವಟಿಕೆಗಳಲ್ಲಿ ತಾನು ಭೇಟಿ ನೀಡಿದ ಮದರಸ ಸಂಸ್ಥೆಗಳ ಸಂಖ್ಯೆಯನ್ನು ಹೇಳಲಿ ಎಂದು ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ.ಅಶ್ರಫ್ ರವರು ಸವಾಲು ಹಾಕಿದ್ದಾರೆ.
ದ.ಕ.ಜಿಲ್ಲೆಯ ಬಂಟ್ವಾಳ ಕ್ಷೇತ್ರದ ಪ್ರಮುಖ ರಾಜಕೀಯ ನಾಯಕರು, ಪ್ರತಿನಿಧಿ ಮತ್ತು ಮಾಜಿ ಸಚಿವರ ಆಪ್ತರಾಗಿದ್ದ ಹರಿಕೃಷ್ಣ ಬಂಟ್ವಾಳ್ ರವರು ಅಂದು ತನ್ನ ರಾಜಕೀಯ ಚಟುವಟಿಕೆಗಳ ಭಾಗವಾದ ಕ್ಷೇತ್ರವಾರು ಭೇಟಿಗಳ ಕಾರ್ಯಕ್ರಮ ಇತ್ಯಾದಿಗಳಲ್ಲಿ ಮದರಸ, ಮಸೀದಿ, ಧಾರ್ಮಿಕ ಸಂಘಟನೆ, ಅನಾಥಾಶ್ರಮ, ಅಲ್ಪಸಂಖ್ಯಾತ ಶಾಲೆ ಕಾಲೇಜುಗಳನ್ನು ಭೇಟಿ ಮಾಡಿ ಅಲ್ಲಿನ ಧ್ಯೇಯೋದ್ದೇಶ ಗಳನ್ನು ಶ್ಲಾಘಿಸಿದ ಸಂದರ್ಭಗಳ ನ್ನು ಮರೆತಿರುವಂತಿದೆ ಎಂದು ಅಶ್ರಫ್ ಹೇಳಿದರು.
ಹರಿಕೃಷ್ಣ ಬಂಟ್ವಾಳ್ ರವರು ತನ್ನ ಹಿಂದಿನ ರಾಜಕೀಯ ಚಟುವಟಿಕೆಗಳ ಭಾಗವಾಗಿ ಭೇಟಿ ನೀಡಿದ ಅಷ್ಟೂ ಮದರಸಗಳ ಚಟುವಟಿಕೆಗಳನ್ನು ಭಯೋತ್ಪಾದನೆಯ ಮೂಲ ಎಂದು ಈ ರೀತಿ ತ್ವರಿತ ಹೇಳಿಕೆ ನೀಡಿರುವುದು ಅವರ ಆರ್.ಎಸ್.ಎಸ್ ಗುಲಾಮಿತ್ವವನ್ನು ಸೂಚಿಸುತ್ತಿದೆ. ಹರಿಕೃಷ್ಣ ಬಂಟ್ವಾಳ್ ರಿಗೆ ಮುದಿತ್ವ ಪ್ರಾಪ್ತವಾಗಿದ್ದರೂ ಅವರ ಸಮಕಾಲೀನ ಇತರ ನಾಯಕರು ಇಂದೂ ಕೂಡ ಪ್ರಭುದ್ದತೆ ಪಾಲಿಸುತ್ತಿದ್ದಾರೆ. ಇನ್ನಾದರೂ ಹೇಳಿಕೆ ನೀಡುವಾಗ ನಿಖೇತನ ಪ್ರೇರಿತ ಲಿಖಿತ ಚೀಟಿ ಹೊರತಾದ ಹೇಳಿಕೆ ನೀಡಲಿ ಎಂದು ಕೆ.ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್