ಮಂಗಳೂರು: ಬಿ.ಜೆ.ಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ತನ್ನ ನಿಕೇತನ ಪ್ರೇರಿತ ಹೇಳಿಕೆಯಲ್ಲಿ ಮದರಸ ಭಯೋತ್ಪಾದನೆಯ ಮೂಲ ಎಂದು ಹೇಳಿಕೆ ನೀಡಿದ್ದಾರೆ. ಹರಿಕೃಷ್ಣ ಬಂಟ್ವಾಳ್ ರವರು ತನ್ನ ಈ ಹಿಂದಿನ ರಾಜಕೀಯ ಜೀವನದಲ್ಲಿ ಅವರ ರಾಜಕೀಯ ಚಟುವಟಿಕೆಗಳಲ್ಲಿ ತಾನು ಭೇಟಿ ನೀಡಿದ ಮದರಸ ಸಂಸ್ಥೆಗಳ ಸಂಖ್ಯೆಯನ್ನು ಹೇಳಲಿ ಎಂದು ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ.ಅಶ್ರಫ್ ರವರು ಸವಾಲು ಹಾಕಿದ್ದಾರೆ.
ದ.ಕ.ಜಿಲ್ಲೆಯ ಬಂಟ್ವಾಳ ಕ್ಷೇತ್ರದ ಪ್ರಮುಖ ರಾಜಕೀಯ ನಾಯಕರು, ಪ್ರತಿನಿಧಿ ಮತ್ತು ಮಾಜಿ ಸಚಿವರ ಆಪ್ತರಾಗಿದ್ದ ಹರಿಕೃಷ್ಣ ಬಂಟ್ವಾಳ್ ರವರು ಅಂದು ತನ್ನ ರಾಜಕೀಯ ಚಟುವಟಿಕೆಗಳ ಭಾಗವಾದ ಕ್ಷೇತ್ರವಾರು ಭೇಟಿಗಳ ಕಾರ್ಯಕ್ರಮ ಇತ್ಯಾದಿಗಳಲ್ಲಿ ಮದರಸ, ಮಸೀದಿ, ಧಾರ್ಮಿಕ ಸಂಘಟನೆ, ಅನಾಥಾಶ್ರಮ, ಅಲ್ಪಸಂಖ್ಯಾತ ಶಾಲೆ ಕಾಲೇಜುಗಳನ್ನು ಭೇಟಿ ಮಾಡಿ ಅಲ್ಲಿನ ಧ್ಯೇಯೋದ್ದೇಶ ಗಳನ್ನು ಶ್ಲಾಘಿಸಿದ ಸಂದರ್ಭಗಳ ನ್ನು ಮರೆತಿರುವಂತಿದೆ ಎಂದು ಅಶ್ರಫ್ ಹೇಳಿದರು.
ಹರಿಕೃಷ್ಣ ಬಂಟ್ವಾಳ್ ರವರು ತನ್ನ ಹಿಂದಿನ ರಾಜಕೀಯ ಚಟುವಟಿಕೆಗಳ ಭಾಗವಾಗಿ ಭೇಟಿ ನೀಡಿದ ಅಷ್ಟೂ ಮದರಸಗಳ ಚಟುವಟಿಕೆಗಳನ್ನು ಭಯೋತ್ಪಾದನೆಯ ಮೂಲ ಎಂದು ಈ ರೀತಿ ತ್ವರಿತ ಹೇಳಿಕೆ ನೀಡಿರುವುದು ಅವರ ಆರ್.ಎಸ್.ಎಸ್ ಗುಲಾಮಿತ್ವವನ್ನು ಸೂಚಿಸುತ್ತಿದೆ. ಹರಿಕೃಷ್ಣ ಬಂಟ್ವಾಳ್ ರಿಗೆ ಮುದಿತ್ವ ಪ್ರಾಪ್ತವಾಗಿದ್ದರೂ ಅವರ ಸಮಕಾಲೀನ ಇತರ ನಾಯಕರು ಇಂದೂ ಕೂಡ ಪ್ರಭುದ್ದತೆ ಪಾಲಿಸುತ್ತಿದ್ದಾರೆ. ಇನ್ನಾದರೂ ಹೇಳಿಕೆ ನೀಡುವಾಗ ನಿಖೇತನ ಪ್ರೇರಿತ ಲಿಖಿತ ಚೀಟಿ ಹೊರತಾದ ಹೇಳಿಕೆ ನೀಡಲಿ ಎಂದು ಕೆ.ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ