ಮಂಗಳೂರು: ಬಿ.ಜೆ.ಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ತನ್ನ ನಿಕೇತನ ಪ್ರೇರಿತ ಹೇಳಿಕೆಯಲ್ಲಿ ಮದರಸ ಭಯೋತ್ಪಾದನೆಯ ಮೂಲ ಎಂದು ಹೇಳಿಕೆ ನೀಡಿದ್ದಾರೆ. ಹರಿಕೃಷ್ಣ ಬಂಟ್ವಾಳ್ ರವರು ತನ್ನ ಈ ಹಿಂದಿನ ರಾಜಕೀಯ ಜೀವನದಲ್ಲಿ ಅವರ ರಾಜಕೀಯ ಚಟುವಟಿಕೆಗಳಲ್ಲಿ ತಾನು ಭೇಟಿ ನೀಡಿದ ಮದರಸ ಸಂಸ್ಥೆಗಳ ಸಂಖ್ಯೆಯನ್ನು ಹೇಳಲಿ ಎಂದು ಮುಸ್ಲಿಮ್ ಒಕ್ಕೂಟ ಇದರ ಅಧ್ಯಕ್ಷರಾದ ಕೆ.ಅಶ್ರಫ್ ರವರು ಸವಾಲು ಹಾಕಿದ್ದಾರೆ.
ದ.ಕ.ಜಿಲ್ಲೆಯ ಬಂಟ್ವಾಳ ಕ್ಷೇತ್ರದ ಪ್ರಮುಖ ರಾಜಕೀಯ ನಾಯಕರು, ಪ್ರತಿನಿಧಿ ಮತ್ತು ಮಾಜಿ ಸಚಿವರ ಆಪ್ತರಾಗಿದ್ದ ಹರಿಕೃಷ್ಣ ಬಂಟ್ವಾಳ್ ರವರು ಅಂದು ತನ್ನ ರಾಜಕೀಯ ಚಟುವಟಿಕೆಗಳ ಭಾಗವಾದ ಕ್ಷೇತ್ರವಾರು ಭೇಟಿಗಳ ಕಾರ್ಯಕ್ರಮ ಇತ್ಯಾದಿಗಳಲ್ಲಿ ಮದರಸ, ಮಸೀದಿ, ಧಾರ್ಮಿಕ ಸಂಘಟನೆ, ಅನಾಥಾಶ್ರಮ, ಅಲ್ಪಸಂಖ್ಯಾತ ಶಾಲೆ ಕಾಲೇಜುಗಳನ್ನು ಭೇಟಿ ಮಾಡಿ ಅಲ್ಲಿನ ಧ್ಯೇಯೋದ್ದೇಶ ಗಳನ್ನು ಶ್ಲಾಘಿಸಿದ ಸಂದರ್ಭಗಳ ನ್ನು ಮರೆತಿರುವಂತಿದೆ ಎಂದು ಅಶ್ರಫ್ ಹೇಳಿದರು.
ಹರಿಕೃಷ್ಣ ಬಂಟ್ವಾಳ್ ರವರು ತನ್ನ ಹಿಂದಿನ ರಾಜಕೀಯ ಚಟುವಟಿಕೆಗಳ ಭಾಗವಾಗಿ ಭೇಟಿ ನೀಡಿದ ಅಷ್ಟೂ ಮದರಸಗಳ ಚಟುವಟಿಕೆಗಳನ್ನು ಭಯೋತ್ಪಾದನೆಯ ಮೂಲ ಎಂದು ಈ ರೀತಿ ತ್ವರಿತ ಹೇಳಿಕೆ ನೀಡಿರುವುದು ಅವರ ಆರ್.ಎಸ್.ಎಸ್ ಗುಲಾಮಿತ್ವವನ್ನು ಸೂಚಿಸುತ್ತಿದೆ. ಹರಿಕೃಷ್ಣ ಬಂಟ್ವಾಳ್ ರಿಗೆ ಮುದಿತ್ವ ಪ್ರಾಪ್ತವಾಗಿದ್ದರೂ ಅವರ ಸಮಕಾಲೀನ ಇತರ ನಾಯಕರು ಇಂದೂ ಕೂಡ ಪ್ರಭುದ್ದತೆ ಪಾಲಿಸುತ್ತಿದ್ದಾರೆ. ಇನ್ನಾದರೂ ಹೇಳಿಕೆ ನೀಡುವಾಗ ನಿಖೇತನ ಪ್ರೇರಿತ ಲಿಖಿತ ಚೀಟಿ ಹೊರತಾದ ಹೇಳಿಕೆ ನೀಡಲಿ ಎಂದು ಕೆ.ಅಶ್ರಫ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ