ಪುತ್ತೂರು : SჄS ದ.ಕ. ಈಸ್ಟ್ ಜಿಲ್ಲಾಧ್ಯಕ್ಷರಾದ ಕೆ.ಎಸ್. ಅಬೂಬಕರ್ ಸಅದಿ ಮಜೂರು ರವರ ತಾಯಿ ನೆಫಿಸಾ ಹಜ್ಜುಮ್ಮ (95) ರವರು ಇದೀಗ ಅವರ ಆತೂರು-ಕುದ್ಲೂರಿನ ಮನೆಯಲ್ಲಿ ನಿಧನರಾಗಿರುತ್ತಾರೆ
ಮೃತರು ಮರ್ಹೂಂ ಸುಲೈಮಾನ್ ಹಾಜಿರವರ ಧರ್ಮಪತ್ನಿ ಯಾಗಿರುತ್ತಾರೆ. ಎಸ್ವೈಎಸ್ ದ.ಕ. ಈಸ್ಟ್ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಸಅದಿ ಮಜೂರು, ಝಕರಿಯ್ಯಾ ಫೈಝಿ ಸಹಿತ ಆರು ಗಂಡು ಮಕ್ಕಳು ಹಾಗೂ ಮೂರು ಹೆಣ್ಣುಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
ಆ ತಾಯಿಯ ವಿಯೋಗಕ್ಕೆ ಎಸ್ವೈಎಸ್ ದ.ಕ. ಈಸ್ಟ್ ಜಿಲ್ಲಾ ಸಮಿತಿ ತೀವ್ರ ಸಂತಾಪ ಸೂಚಿಸಿದೆ. ತಾಯಿಯ ಮಗ್ಫಿರತ್ ಮರ್ಹಮತ್ಗಾಗಿ ಪ್ರತಿ ಸೆಂಟರ್, ಬ್ರಾಂಚುಗಳಲ್ಲಿ ತಹ್ಲೀಲ್ ಹಾಗೂ ಕುರ್ಆನ್ ಪಾರಾಯಣ ಮಾಡಿ ವಿಶೇಷ ದುಆಃ ಮಾಡಬೇಕಾಗಿ ಉಪಾಧ್ಯಕ್ಷರಾದ ಅಬ್ದುಲ್ ಹಮೀದ್ ಸಖಾಫಿ ಕೊಡುಂಗಾಯಿ ಹಾಗೂ ಪ್ರಧಾನ ಕಾರ್ಯದರ್ಶಿ ಸ್ವಾದಿಖ್ ಮಾಸ್ಟರ್ ಮಲೆಬೆಟ್ಟು ವಿನಂತಿಸಿದ್ದಾರೆ.
ನಾಳೆ ಬೆಳಗ್ಗೆ 10ಕ್ಕೆ ದಫನ
SჄS ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಕಾರ್ಯಕಾರಿ ಸದಸ್ಯ ಮಜೂರು ಅಬೂಬಕರ್ ಸಅದಿ (ಆತೂರು) ಅವರ ತಾಯಿ,ಇಂದು ಸಾಯಂಕಾಲ ನಿಧನರಾದ ನಫೀಸಾ ಹಜ್ಜುಮ್ಮ(95) ಅವರ ಜನಾಝ ನಮಾಝ್ ಮತ್ತು ದಫನ ಕಾರ್ಯವು ನಾಳೆ (ಸೆಪ್ಟೆಂಬರ್ 8 ಗುರುವಾರ) ಬೆಳಗ್ಗೆ 10 ಗಂಟೆಗೆ, ಸಅದಿ ಅವರ ಮನೆಯ ಸಮೀಪವಿರುವ ಆತೂರು- ಕುದ್ಲೂರು ಬದ್ರ್ ಜುಮಾ ಮಸ್ಜಿದ್ ಖಬರಸ್ಥಾನದಲ್ಲಿ ನಡೆಯುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.
ಆ ಸಮಯದಲ್ಲಿ ಸುನ್ನೀ ಕಾರ್ಯಕರ್ತರು ಗರಿಷ್ಠ ಸಂಖ್ಯೆಯಲ್ಲಿ ಆಗಮಿಸಿ ಮಯ್ಯಿತ್ ನಮಾಝ್ ಮತ್ತು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಬೇಕೆಂದು SჄS ರಾಜ್ಯ ಸಮಿತಿ ಮನವಿ ಮಾಡಿದೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ