ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮಸೀದಿಗಳ ಆಡಳಿತ ಸಮಿತಿಗಳ ಪದಾಧಿಕಾರಿಗಳು ಸೆಪ್ಟೆಂಬರ್ 10 ರಂದು ಚಿಕ್ಕಮಗಳೂರು ಜಿಲ್ಲಾ ವಕ್ಫ್ ಸಲಹಾ ಸಮಿತಿಗೆ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಅಲ್ ಹಾಜ್ ಮೊಹಮ್ಮದ್ ಶಾಹಿದ್ ರಜ್ವಿ ಅವರನ್ನು ಸನ್ಮಾನಿಸಿದರು.
ಕಡೂರು ತಾಲ್ಲೂಕಿನ ಮುಸ್ಲಿಂ ಸಮುದಾಯದ ಸಮಸ್ಯೆಗಳ ಕುರಿತು ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಪುರಸ್ಕರಿಸಿದ ಅಧ್ಯಕ್ಷರು, ಶೀಘ್ರವಾಗಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ವಕ್ಫ್ ಬೋರ್ಡ್ ಸಿಬ್ಬಂದಿಯೊಂದಿಗೆ ಪರಿಶೀಲನೆ ನಡೆಸಿ ಸಮಸ್ಯೆಯನ್ನು ಬಗೆಹರಿಸಿ ಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಡೂರು ಪಟ್ಟಣದ 10 ಮಸೀದಿಗಳ ಅಧ್ಯಕ್ಷರುಗಳು ಹಾಗೂ ತಾಲೂಕಿನ ಎಲ್ಲಾ ಮಸೀದಿಗಳ ಮುಖಂಡರು ಆಗಮಿಸಿದ್ದರು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷರಾದ ಅಲ್ ಹಾಜ್ ಫೈರೋಜ್ ಅಹಮದ್ ರಜ್ವಿ ರವರು ಪತ್ರಿಕಾ ಪ್ರಟಣೆಯಲ್ಲಿ ತಿಳಿಸಿದ್ದಾರೆ.