ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಸುರತ್ಕಲ್ ನ ಫಾಝಿಲ್ ಮತ್ತು ಸುಳ್ಯದ ಮಸೂದ್ ವಿಷಯದಲ್ಲಿ ಪ್ರಸ್ತುತ ಸರಕಾರ ತಾರತಮ್ಯ ಪ್ರದರ್ಶಿಸಿದ ಬಗ್ಗೆ ಮತ್ತು ಸಂಬಂಧಿತ ಇತರ ವಿಷಯಗಳ ಬಗ್ಗೆ ಸುರತ್ಕಲ್ ನ ಮುಸ್ಲಿಮ್ ಐಕ್ಯತಾ ವೇದಿಕೆ ನಿಯೋಗವು ,ಶ್ರೀ ಯು. ಟಿ.ಖಾದರ್ ನೇತೃತ್ವದಲ್ಲಿ ಕರ್ನಾಟಕ ಸರಕಾರದ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ಧರಾಮಯ್ಯರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಸುರತ್ಕಲ್ ಫಾಝಿಲ್ ಮತ್ತು ಸುಳ್ಯದ ಮಸೂದ್ ಹತ್ಯಾ ಘಟನೆ ಮತ್ತು ನಂತರದ ಬೆಳೆವಣಿಗೆಗಳಲ್ಲಿ ಪ್ರಸ್ತುತ ಸರಕಾರ ಮತೀಯ ತಾರತಮ್ಯ ಪ್ರದರ್ಶಿಸಿದ ಬಗ್ಗೆ ಮತ್ತು ಘಟನೆಯನ್ನು ನಿರ್ಲಕ್ಷಿಸಿದ ಬಗ್ಗೆ ದ್ವನಿ ಎತ್ತಲು ಮತ್ತು ನ್ಯಾಯ ಖಾತರಿ ಪಡಿಸಲು ಪ್ರಯತ್ನಿಸಲು ಕೋರಿ ವಿಸ್ತೃತ ಮನವಿಯನ್ನು ಸಲ್ಲಿಸಲಾಗಿದೆ.
ನಿಯೋಗದಲ್ಲಿ ಮುಸ್ಲಿಮ್ ಐಕ್ಯತಾ ವೇದಿಕೆ ಅಧ್ಯಕ್ಷರಾದ ಅಶ್ರಫ್ ಬದ್ರಿಯಾ, ಮೃತ ಫಾಝಿಲ್ ತಂದೆ ಉಮರ್ ಫಾರೂಕ್, ಮುಸ್ಲಿಮ್ ಒಕ್ಕೂಟ ಅಧ್ಯಕ್ಷರಾದ ಕೆ.ಅಶ್ರಫ್, ವೇದಿಕೆ ಸದಸ್ಯರಾದ ಅಬೂಬಕ್ಕರ್ ಕುಳಾಯಿ, ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಬದಲ್ಲಿ ಮಾನ್ಯ ಸಿದ್ದರಾಮಯ್ಯ ರವರು ಈ ಬಗ್ಗೆ ಪರಿಶೀಲಿಸಿ ಸದನದಲ್ಲಿ ದ್ವನಿ ಎತ್ತುವ ಬಗ್ಗೆ ಭರವಸೆ ನೀಡಿದರು. ಸಂತ್ರಸ್ತರಿಗೆ ತಮ್ಮ ಹಂತದಲ್ಲಿ ಸಾಧ್ಯವಾಗುವ ಸರ್ವ ನೆರವು ನೀಡುವ ಬಗ್ಗೆ ಮಾನ್ಯ ಯು.ಟಿ.ಖಾದರ್ ಕೂಡಾ ಈ ಸಂದರ್ಬದಲ್ಲಿ ಭರವಸೆ ನೀಡಿದರು. ನಿಯೋಗವು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ. ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್, ಜೇ.ಡಿ.ಎಸ್.ನಾಯಕರಾದ ಎಚ್.ಡಿ.ಕುಮಾರ ಸ್ವಾಮಿ, ಶಾಸಕರಾದ ಬಿ. ಎಂ.ಫಾರೂಕ್, ಬಿ.ಝಡ್.ಝಮೀರ್ ಅಹ್ಮದ್ ಖಾನ್, ಶ್ರೀ ರಮೇಶ್ ಕುಮಾರ್ ಮತ್ತು ಪ್ರಿಯಾಂಕ ಖರ್ಗೆ ರವರನ್ನು ಭೇಟಿ ಮಾಡಿ ಈ ವಿಷಯದಲ್ಲಿ ಚರ್ಚೆ ನಡೆಸಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)