ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಸುರತ್ಕಲ್ ನ ಫಾಝಿಲ್ ಮತ್ತು ಸುಳ್ಯದ ಮಸೂದ್ ವಿಷಯದಲ್ಲಿ ಪ್ರಸ್ತುತ ಸರಕಾರ ತಾರತಮ್ಯ ಪ್ರದರ್ಶಿಸಿದ ಬಗ್ಗೆ ಮತ್ತು ಸಂಬಂಧಿತ ಇತರ ವಿಷಯಗಳ ಬಗ್ಗೆ ಸುರತ್ಕಲ್ ನ ಮುಸ್ಲಿಮ್ ಐಕ್ಯತಾ ವೇದಿಕೆ ನಿಯೋಗವು ,ಶ್ರೀ ಯು. ಟಿ.ಖಾದರ್ ನೇತೃತ್ವದಲ್ಲಿ ಕರ್ನಾಟಕ ಸರಕಾರದ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ಧರಾಮಯ್ಯರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಸುರತ್ಕಲ್ ಫಾಝಿಲ್ ಮತ್ತು ಸುಳ್ಯದ ಮಸೂದ್ ಹತ್ಯಾ ಘಟನೆ ಮತ್ತು ನಂತರದ ಬೆಳೆವಣಿಗೆಗಳಲ್ಲಿ ಪ್ರಸ್ತುತ ಸರಕಾರ ಮತೀಯ ತಾರತಮ್ಯ ಪ್ರದರ್ಶಿಸಿದ ಬಗ್ಗೆ ಮತ್ತು ಘಟನೆಯನ್ನು ನಿರ್ಲಕ್ಷಿಸಿದ ಬಗ್ಗೆ ದ್ವನಿ ಎತ್ತಲು ಮತ್ತು ನ್ಯಾಯ ಖಾತರಿ ಪಡಿಸಲು ಪ್ರಯತ್ನಿಸಲು ಕೋರಿ ವಿಸ್ತೃತ ಮನವಿಯನ್ನು ಸಲ್ಲಿಸಲಾಗಿದೆ.
ನಿಯೋಗದಲ್ಲಿ ಮುಸ್ಲಿಮ್ ಐಕ್ಯತಾ ವೇದಿಕೆ ಅಧ್ಯಕ್ಷರಾದ ಅಶ್ರಫ್ ಬದ್ರಿಯಾ, ಮೃತ ಫಾಝಿಲ್ ತಂದೆ ಉಮರ್ ಫಾರೂಕ್, ಮುಸ್ಲಿಮ್ ಒಕ್ಕೂಟ ಅಧ್ಯಕ್ಷರಾದ ಕೆ.ಅಶ್ರಫ್, ವೇದಿಕೆ ಸದಸ್ಯರಾದ ಅಬೂಬಕ್ಕರ್ ಕುಳಾಯಿ, ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಬದಲ್ಲಿ ಮಾನ್ಯ ಸಿದ್ದರಾಮಯ್ಯ ರವರು ಈ ಬಗ್ಗೆ ಪರಿಶೀಲಿಸಿ ಸದನದಲ್ಲಿ ದ್ವನಿ ಎತ್ತುವ ಬಗ್ಗೆ ಭರವಸೆ ನೀಡಿದರು. ಸಂತ್ರಸ್ತರಿಗೆ ತಮ್ಮ ಹಂತದಲ್ಲಿ ಸಾಧ್ಯವಾಗುವ ಸರ್ವ ನೆರವು ನೀಡುವ ಬಗ್ಗೆ ಮಾನ್ಯ ಯು.ಟಿ.ಖಾದರ್ ಕೂಡಾ ಈ ಸಂದರ್ಬದಲ್ಲಿ ಭರವಸೆ ನೀಡಿದರು. ನಿಯೋಗವು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ. ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್, ಜೇ.ಡಿ.ಎಸ್.ನಾಯಕರಾದ ಎಚ್.ಡಿ.ಕುಮಾರ ಸ್ವಾಮಿ, ಶಾಸಕರಾದ ಬಿ. ಎಂ.ಫಾರೂಕ್, ಬಿ.ಝಡ್.ಝಮೀರ್ ಅಹ್ಮದ್ ಖಾನ್, ಶ್ರೀ ರಮೇಶ್ ಕುಮಾರ್ ಮತ್ತು ಪ್ರಿಯಾಂಕ ಖರ್ಗೆ ರವರನ್ನು ಭೇಟಿ ಮಾಡಿ ಈ ವಿಷಯದಲ್ಲಿ ಚರ್ಚೆ ನಡೆಸಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ