ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಸುರತ್ಕಲ್ ನ ಫಾಝಿಲ್ ಮತ್ತು ಸುಳ್ಯದ ಮಸೂದ್ ವಿಷಯದಲ್ಲಿ ಪ್ರಸ್ತುತ ಸರಕಾರ ತಾರತಮ್ಯ ಪ್ರದರ್ಶಿಸಿದ ಬಗ್ಗೆ ಮತ್ತು ಸಂಬಂಧಿತ ಇತರ ವಿಷಯಗಳ ಬಗ್ಗೆ ಸುರತ್ಕಲ್ ನ ಮುಸ್ಲಿಮ್ ಐಕ್ಯತಾ ವೇದಿಕೆ ನಿಯೋಗವು ,ಶ್ರೀ ಯು. ಟಿ.ಖಾದರ್ ನೇತೃತ್ವದಲ್ಲಿ ಕರ್ನಾಟಕ ಸರಕಾರದ ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ಧರಾಮಯ್ಯರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಸುರತ್ಕಲ್ ಫಾಝಿಲ್ ಮತ್ತು ಸುಳ್ಯದ ಮಸೂದ್ ಹತ್ಯಾ ಘಟನೆ ಮತ್ತು ನಂತರದ ಬೆಳೆವಣಿಗೆಗಳಲ್ಲಿ ಪ್ರಸ್ತುತ ಸರಕಾರ ಮತೀಯ ತಾರತಮ್ಯ ಪ್ರದರ್ಶಿಸಿದ ಬಗ್ಗೆ ಮತ್ತು ಘಟನೆಯನ್ನು ನಿರ್ಲಕ್ಷಿಸಿದ ಬಗ್ಗೆ ದ್ವನಿ ಎತ್ತಲು ಮತ್ತು ನ್ಯಾಯ ಖಾತರಿ ಪಡಿಸಲು ಪ್ರಯತ್ನಿಸಲು ಕೋರಿ ವಿಸ್ತೃತ ಮನವಿಯನ್ನು ಸಲ್ಲಿಸಲಾಗಿದೆ.
ನಿಯೋಗದಲ್ಲಿ ಮುಸ್ಲಿಮ್ ಐಕ್ಯತಾ ವೇದಿಕೆ ಅಧ್ಯಕ್ಷರಾದ ಅಶ್ರಫ್ ಬದ್ರಿಯಾ, ಮೃತ ಫಾಝಿಲ್ ತಂದೆ ಉಮರ್ ಫಾರೂಕ್, ಮುಸ್ಲಿಮ್ ಒಕ್ಕೂಟ ಅಧ್ಯಕ್ಷರಾದ ಕೆ.ಅಶ್ರಫ್, ವೇದಿಕೆ ಸದಸ್ಯರಾದ ಅಬೂಬಕ್ಕರ್ ಕುಳಾಯಿ, ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಬದಲ್ಲಿ ಮಾನ್ಯ ಸಿದ್ದರಾಮಯ್ಯ ರವರು ಈ ಬಗ್ಗೆ ಪರಿಶೀಲಿಸಿ ಸದನದಲ್ಲಿ ದ್ವನಿ ಎತ್ತುವ ಬಗ್ಗೆ ಭರವಸೆ ನೀಡಿದರು. ಸಂತ್ರಸ್ತರಿಗೆ ತಮ್ಮ ಹಂತದಲ್ಲಿ ಸಾಧ್ಯವಾಗುವ ಸರ್ವ ನೆರವು ನೀಡುವ ಬಗ್ಗೆ ಮಾನ್ಯ ಯು.ಟಿ.ಖಾದರ್ ಕೂಡಾ ಈ ಸಂದರ್ಬದಲ್ಲಿ ಭರವಸೆ ನೀಡಿದರು. ನಿಯೋಗವು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಶ್ರೀ. ಬಿ.ಕೆ.ಹರಿಪ್ರಸಾದ್, ಡಿ.ಕೆ.ಶಿವಕುಮಾರ್, ಜೇ.ಡಿ.ಎಸ್.ನಾಯಕರಾದ ಎಚ್.ಡಿ.ಕುಮಾರ ಸ್ವಾಮಿ, ಶಾಸಕರಾದ ಬಿ. ಎಂ.ಫಾರೂಕ್, ಬಿ.ಝಡ್.ಝಮೀರ್ ಅಹ್ಮದ್ ಖಾನ್, ಶ್ರೀ ರಮೇಶ್ ಕುಮಾರ್ ಮತ್ತು ಪ್ರಿಯಾಂಕ ಖರ್ಗೆ ರವರನ್ನು ಭೇಟಿ ಮಾಡಿ ಈ ವಿಷಯದಲ್ಲಿ ಚರ್ಚೆ ನಡೆಸಿದೆ.
















ಇನ್ನಷ್ಟು ಸುದ್ದಿಗಳು
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ