ಶತ್ರುವಿನೊಂದಿಗೂ ಕರುಣೆ ತೋರಿ ಉದಾತ್ತ ಮಾದರಿಯನ್ನು ಮುಂದಿಟ್ಟ ಪ್ರವಾದಿ ಮುಹಮ್ಮದ್ (ಸ) ರವರ ನಡೆ-ನುಡಿಗಳನ್ನು ಜಗತ್ತಿನ ಮುಂದೆ ಅನಾವರಣಗೊಳಿಸುವ ಬದಲು
ತಮ್ಮ ಸಿದ್ಧಾಂತಗಳಿಗೆ ಧಾರ್ಮಿಕ ಲೇಪನ ಹಚ್ಚಿ ಸಮರ್ಥಿಸುವುದಕ್ಕಾಗಿ ಅವುಗಳನ್ನು ದುರ್ವ್ಯಾಖ್ಯಾನಗೊಳಿಸುವ ಪ್ರವೃತ್ತಿ ಖಂಡನೀಯ ಎಂದು ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ತಮ್ಮ ವಿರುದ್ಧ ಖಡ್ಗವೆತ್ತಿದ್ದ ಶತ್ರುವೊಬ್ಬನು ನಿರಾಯುಧನಾದಾಗ
ಅವನ ಮೇಲೆ ಪ್ರತೀಕಾರ ತೀರಿಸಿಕೊಳ್ಳುವ ಅವಕಾಶ ಪ್ರವಾದಿಗಳಿಗಿತ್ತು. ಆದರೆ ಅವರು ಅವನನ್ನು ಕ್ಷಮಿಸಿ ಕಳುಹಿಸಿಕೊಟ್ಟರು.
ಪ್ರವಾದಿಯವರ ಉದಾತ್ತ ಜೀವನ ಸಂದೇಶಕ್ಕೆ ಮಾದರಿಯಾದ ಈ ಘಟನೆಯನ್ನು ವಿಕಲವಾಗಿ ವ್ಯಾಖ್ಯಾನಿಸಿ ಪ್ರವಾದಿಗಳು ಪ್ರತೀಕಾರ ತೀರಿಸುವಂತೆ ಪಿ ಎಫ್ ಐ ಸಂಘಟನೆಯು ಕೇರಳದಲ್ಲಿ ನಡೆಸಿದ ಸಮ್ಮೇಳನ ಒಂದರಲ್ಲಿ ಭಾಷಣ ಮಾಡಲಾಗಿದೆ. ಇದು ಸ್ಪಷ್ಟವಾದ ಪ್ರವಾದಿ ನಿಂದನೆಯಾಗಿದ್ದು, ಇಸ್ಲಾಮಿನ ಬಗ್ಗೆ
ಕೋಮುವಾದ, ಭಯೋತ್ಪಾದನೆಗಳನ್ನು ಆರೋಪಿಸುತ್ತಿರುವ ಸಂಘಪರಿವಾರಕ್ಕೆ ಅವರ ವಾದಗಳನ್ನು ಮತ್ತಷ್ಟು ಹರಡಲು
ಇಂತಹ ಹೇಳಿಕೆಗಳು
ಸರಕಾಗುತ್ತಿದೆ.
ಇದು ಅಕ್ಷಮ್ಯವಾಗಿದ್ದು, ಇಂತಹ ಹೇಳಿಕೆಗಳನ್ನು ನೀಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ಬಗ್ಗೆ ಸಮಾಜವು ಜಾಗೃತವಾಗಿರಬೇಕು ಎಂದು ಎಸ್ ವೈ ಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಜಿಎಂ ಕಾಮಿಲ್ ಸಖಾಫಿ ಕರೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)